HomeKarnataka Newsಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ: CM ಸಿದ್ದರಾಮಯ್ಯ

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ: CM ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಹಾವೇರಿ: ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ.

ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ

ಬಿಜೆಪಿಯವರು ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು.

ಬಿಜೆಪಿಗೆ ನೈತಿಕ ಹಕ್ಕಿಲ್ಲ

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು. ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಸರ್ಕಾರ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿರುವುದು ಮಾಡಿರುವುದು ಸುಳ್ಳು ಆರೋಪ ಎಂದರು.

ಅಧಿಕಾರ ಹಂಚಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ ಮಾಡಿದ್ದಾರೆಯೇ? ಎಂದರು.

ಹೈ ಕಮಾಂಡ್ ಶಿವರಾತ್ರಿಯ ನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ದೆಹಲಿಗೆ ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!