HomeHassan30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಧರಿಸಿ ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ!: ಕೆರೆಯಲ್ಲಿ...

30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಧರಿಸಿ ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ!: ಕೆರೆಯಲ್ಲಿ ಶವಕ್ಕಾಗಿ ಶೋಧ

For Dai;y Updates Join Our whatsapp Group

Spread the love

ಹಾಸನ: ಮದುವೆ ಸಮಾರಂಭಕ್ಕೆ ತೆರಳಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ 29 ವರ್ಷದ ಪ್ರಿಯಾಂಕಾ ನಿಗೂಢವಾಗಿ ಕಾಣೆಯಾಗಿರುವ ಪ್ರಕರಣ ಹಾಸನ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಅವರು ಕಣ್ಮರೆಯಾಗಿದ್ದಾರೆ.

ಅದೇ ದಿನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರೊಂದಿಗೆ ಕೊನೆಯ ಬಾರಿ ದೂರವಾಣಿ ಮಾತುಕತೆ ನಡೆಸಿದ್ದ ಅವರು, ಬಳಿಕ ಸಂಪರ್ಕಕ್ಕೆ ಸಿಗದೇ ಹೋದರು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಕೆರೆಯ ಸಮೀಪ ಇಂದು ಪ್ರಿಯಾಂಕಾ ಅವರ ಉಡುಪುಗಳು, ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ನಿನ್ನೆ ಸ್ಥಳ ಪರಿಶೀಲಿಸಿದಾಗ ಈ ವಸ್ತುಗಳು ಕಾಣಿಸದಿದ್ದುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಿಯಾಂಕಾ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿದ್ದರು. ಆಭರಣಗಳ ಸಮೇತವೇ ಅವರು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಅನುಮಾನಗಳನ್ನೆಬ್ಬಿಸಿದೆ.

ಕಲ್ಕೆರೆ ಗ್ರಾಮದ ಕೆರೆಯ ಪಕ್ಕದಲ್ಲೇ ಉಡುಪುಗಳು ಪತ್ತೆಯಾಗಿರುವ ಹಿನ್ನೆಲೆ, ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದರ ನಡುವೆ, ನಿನ್ನೆ ದೂರು ನೀಡಲು ಕುಟುಂಬಸ್ಥರು ಪರದಾಡಿದರೂ ಅರೇಹಳ್ಳಿ ಹಾಗೂ ಬೇಲೂರು ಪೊಲೀಸರು ಸ್ಪಂದಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. “ತಕ್ಷಣ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಬೇರೆ ಆಗಿರಬಹುದಿತ್ತು,” ಎಂದು ಕುಟುಂಬದವರು ಕಣ್ಣೀರಿನಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ಪೊಲೀಸರು ಸಮಗ್ರ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!