ಚಾಮರಾಜನಗರ:- ಜಿಲ್ಲೆಯ ಹನೂರು ತಾಲ್ಲೂಕು, ಗುಂಡಾಲ್ ಜಲಾಶಯದ ಬಳಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ವರದಿಗಳ ಪ್ರಕಾರ, ಸ್ಥಳೀಯ ಬೇಟೆಗಾರರು ಜಲಾಶಯದ ಪ್ರಾಣಿಗಳನ್ನು ಸೆರೆ ಹಿಡಿಯಲು ಉರುಳು ಹಾಕಿದ್ದರು, ಅದಕ್ಕೆ ಹುಲಿ ಸಿಲುಕಿಸಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಘಟನೆ ಸ್ಥಳಕ್ಕೆ ಬಿ.ಆರ್.ಟಿ. ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಡಿಸಿಎಫ್ ಶ್ರೀಪತಿ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಸ್ಥಳೀಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಪೊಲೀಸರಿಗೆ ಕೂಡ ಮಾಹಿತಿ ನೀಡಲಾಗಿದೆ, ಮತ್ತು ಶ್ವಾನದಳದ ಸಿಬ್ಬಂದಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.



