ಕೊಪ್ಪಳ: ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೌಕರ ರಮೇಶ್ ದಂಡಿನ ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಆಘಾತ ಮೂಡಿಸಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಗಲಾಟೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣವನ್ನು ತಾವರಗೇರಾ ಪೊಲೀಸ್ ಠಾಣೆ ದಾಖಲಿಸಿಕೊಂಡಿದ್ದು, ಐವರ ವಿರುದ್ಧ ದೂರು ದಾಖಲಾಗಿದೆ.
ಇದೇ ವೇಳೆ ಜಮಖಂಡಿನಲ್ಲಿ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯಲು ಮುಂದಾದ ಹಿನ್ನೆಲೆಯಲ್ಲಿ ನಾಲ್ವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೆಟ್ರೋಲ್ ಬಾಯಿಗೆ ಸೇರಿದ ಕಾರಣ ನಾಲ್ವರೂ ಅಸ್ವಸ್ಥಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಡಿಹೆಚ್ಒ ಮಂಜುನಾಥ ಹಳೆಯ ನೌಕರರನ್ನು ಮುಂದುವರಿಸುವ ಭರವಸೆ ನೀಡಿದ ವೇಳೆ ದಲಿತ ಸಂಘಟನೆಗಳು ಹಾಗೂ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಿಸಿದರು.



