ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.
ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಯಾರು ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ ಅಳವಡಿಸಿತ್ತು. ಇದೀಗ ಶಿವರಾತ್ರಿ ಜಾತ್ರೆ ಕೂಡ ಮುಕ್ತಾಯವಾದ ಹಿನ್ನೆಲೆ ಪಾದಯಾತ್ರೆಯ ಮೂಲಕ ಹೋಗುವವರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ.



