ಕಲಬುರಗಿ: ಜಿಲ್ಲೆಯ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಉದ್ವಿಗ್ನತೆ ತಲೆದೋರಿದ್ದು, ಎರಡು ಸಮುದಾಯಗಳ ನಡುವೆ ಗುದ್ದಾಟ ನಡೆದಿದೆ.
ಗೋಕುಲ ನಗರದಲ್ಲಿನ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಭಾವಚಿತ್ರ ಇಟ್ಟು ಸಂಭ್ರಮಾಚರಣೆ ನಡೆಯುತ್ತಿತ್ತು. ಡಿಜೆ ಸೌಂಡ್ ಜೋರಾಗಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ. ಮಾತಿನ ಚಕಮಕಿ ಕಲ್ಲು-ಕಟ್ಟಿಗೆ ದಾಳಿಗೆ ತಿರುಗಿ, ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಬಳಿಕ ಹಿರಿಯರ ಮಧ್ಯಸ್ಥಿಕೆಯಲ್ಲಿ ಎರಡು ಸಮುದಾಯಗಳ ನಡುವೆ ಸಂಧಾನ ನಡೆದಿದ್ದು, ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.
ಘಟನೆ ಗ್ರಾಮದಲ್ಲಿ ಕ್ಷಣಿಕ ಉದ್ವಿಗ್ನತೆಯನ್ನು ಉಂಟುಮಾಡಿದರೂ, ಇದೀಗ ಪರಿಸ್ಥಿತಿ ಶಾಂತಿಯುತವಾಗಿದೆ.



