ಭೋಪಾಲ್:- ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವ್ಯಾನ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದ ಮೂಲಕ ಗಾಯಾಳುಗಳನ್ನು ತಕ್ಷಣ ಗೋಹದ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ವೈದ್ಯರ ಸೂಚನೆ ಮೇರೆಗೆ ಗ್ವಾಲಿಯರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ರಭಸಕ್ಕೆ ವ್ಯಾನ್ ಸಂಪೂರ್ಣವಾಗಿ ಛಿದ್ರಗೊಂಡಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆಗೆ ತೆರಳಿದ್ದ ಬಸ್ ಜನರನ್ನು ಇಳಿಸಿ ಭಿಂಡ್ನಿಂದ ಗ್ವಾಲಿಯರ್ಗೆ ಹೋಗುತ್ತಿತ್ತು. ಈ ಬಸ್ ಗಿಲ್ ಧಾಬಾ ಬಳಿ ಬರುತ್ತಿದ್ದಂತೆ, ಗ್ವಾಲಿಯರ್ನಿಂದ ಭಿಂಡ್ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವ್ಯಾನ್ನಲ್ಲಿದ್ದ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳೀಯರ ಸಹಾಯದ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮೃತರನ್ನು ಭರತ್ ಶರ್ಮಾ, ಅತುಲ್ ಶಿವಾರೆ, ಜಗದೀಶ್ ಭದೌರಿಯಾ, ಪ್ರದೀಪ್ ಪ್ರಜಾಪತಿ ಮತ್ತು ಆನಂದ್ ಭದೌರಿಯಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಕೇತು ಶರ್ಮಾ (10), ಸಂತೋಷ್ ಶರ್ಮಾ (37), ಮೇವರಂ ಭದೌರಿಯಾ (61), ರಾಮ್ಲಖಾನ್ (59), ಮೀರಾ (30), ಮತ್ತು ಸುಖವೀರ್ ಶರ್ಮಾ (50) ಗ್ವಾಲಿಯರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.



