ಬೆಳಗಾವಿ:- ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ.
ಕಲ್ಮೇಶ್ ಕೋಟಿ (50) ಕೊಲೆಯಾದ ವ್ಯಕ್ತಿ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಶವ ಪತ್ತೆಯಾಗಿದೆ. ಮೃತ ಕಲ್ಮೇಶ್, ತುಮಕೂರಿನಲ್ಲಿ ಹೋಮ್ ಕೇರ್ನಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಕೊಲೆ ತಡವಾಗಿ ಬೆಳಕಿಗೆ ಬಂದಿದೆ.
ದುಷ್ಕರ್ಮಿಗಳು ಕಲ್ಮೇಶ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು, ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.
ಹತ್ತು ವರ್ಷಗಳ ಹಿಂದೆ ಕಲ್ಮೇಶ್ ಪತ್ನಿ ದೂರವಾಗಿದ್ದ ಕಾರಣ ತಮ್ಮ ವೃದ್ಧ ತಾಯಿಯೊಂದಿಗೆ ವಾಸವಿದ್ದರು. ಘಟನೆ ತಿಳಿದು ಪತ್ನಿ ಹಾಗೂ ಪುತ್ರ ಗ್ರಾಮಕ್ಕೆ ಆಗಮಿಸಿದ್ದಾರೆ. ಪ್ರಕರಣ ಸಂಬಂಧ ಎಸ್ಪಿ ರಾಮರಾಜನ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣಕಾಸು, ಆಸ್ತಿ ಹಾಗೂ ಮಹಿಳೆ ಸಂಬಂಧಿತ ವಿಚಾರಗಳಿಗೆ ಕೊಲೆ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



