HomeGadag Newsಶಾಸಕ ಸ್ಥಾನದಿಂದ ಅಮಾನತುಗೊಳಿಸಿ: ಡಾ. ಚಂದ್ರು ಲಮಾಣಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಶಾಸಕ ಸ್ಥಾನದಿಂದ ಅಮಾನತುಗೊಳಿಸಿ: ಡಾ. ಚಂದ್ರು ಲಮಾಣಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

For Dai;y Updates Join Our whatsapp Group

Spread the love

ಗದಗ: ಶಾಸಕ ಡಾ. ಚಂದ್ರು ಲಮಾಣಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಹಟ್ಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕ‌ ಡಾ.ಚಂದ್ರು ಲಮಾಣಿ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಡಾ. ಚಂದ್ರು ಲಮಾಣಿಗೆ ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದ್ದು,

ಶಿರಹಟ್ಟಿ ಪೇಟೆ ಆಂಜನೇಯ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಮಾಜಿ ಶಾಸಕರುಗಳಾದ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

ಪ್ರಕರಣದ ಹಿನ್ನೆಲೆ

ಶಾಸಕ ಚಂದ್ರು ಲಮಾಣಿ, 1 ಕೋಟಿ ರೂಪಾಯಿ ಮೌಲ್ಯದ ಕಾಂಟ್ರಾಕ್ಟ್​ಗಾಗಿ ಗುತ್ತಿಗೆದಾರರಿಂದ 11 ಲಕ್ಷ ರೂಪಾಯಿ ಕಮಿಷನ್ ಕೇಳಿದ್ದರು. ಈ ಸಂಬಂಧ ಶಾಸಕ ಚಂದ್ರು ಲಮಾಣಿ, ಆಪ್ತ ಸಹಾಯಕರಾದ ಗುರು ಮತ್ತು ಮಂಜುನಾಥ್ ಅವರನ್ನು ಕೂಡ ಹಣ ಸ್ವೀಕರಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿತ್ತು.

ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರ ವಿಜಯ ಪೂಜಾರ ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ ನಡೆಸಿದ್ದರು. ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಸೇರಿದ್ದು ಎಂದು ಹೇಳಲಾಗುತ್ತಿರುವ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಲಂಚ ಪಡೆಯುತ್ತಿರುವಾಗಲೇ ದಾಳಿ ನಡೆದಿತ್ತು.

ಕಮಿಷನ್​ಗೆ ಬೇಡಿಕೆ ಇಟ್ಟ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಕಾರ್ಯಾಚರಣೆ ನಡೆದಿದ್ದು, ಪ್ಲಾನ್​ ಪ್ರಕಾರ ಪೂಜಾರ ಕಮಿಷನ್ ಕೊಡಲು ಒಪ್ಪಿಕೊಂಡಿದ್ದರು. ಅದರಂತೆ, ಆಸ್ಪತ್ರೆಯಲ್ಲಿ ಶಾಸಕರ ಪಿಎಗಳಿಗೆ ಮೊದಲ ಕಂತಿನ 5 ಲಕ್ಷ ರೂ.ಗಳನ್ನು ನೀಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು.

ಗದಗ ಜಿಲ್ಲೆಯ ಸಂಕದಾಳ ಗ್ರಾಮದ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸುಮಾರು 1 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ 1% ಕಮಿಷನ್ (ಲಂಚ) ಬೇಡಿಕೆ ಇಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!