ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ವರವಿ ಕ್ಷೇತ್ರದ ಬ್ರಹ್ಮಲೀನ ಶ್ರೀ ವಿರೂಪಾಕ್ಷಯ್ಯ ಸ್ವಾಮಿಗಳ 110ನೇ ವಾರ್ಷಿಕ ಪುಣ್ಯಾರಾಧನೆಯ ಸಪ್ತಾಹ ಕಾರ್ಯಕ್ರಮವು ಫೆ. 26ರಿಂದ ಮಾ. 5ರವರೆಗೆ ಶ್ರೀ ಮಠದಲ್ಲಿ ಜರುಗಲಿದೆ.
ಫೆ. 26ರ ಬ್ರಾಹ್ಮೀ ಮುಹೂರ್ತದಲ್ಲಿ ಶಿವನಾಮಸ್ಮರಣೆಯೊಂದಿಗೆ ಸಪ್ತಾಹ ಪ್ರಾರಂಭವಾಗಿ ಪ್ರತಿ ದಿವಸ ಬೆಳಿಗ್ಗೆ 8ರಿಂದ 10.30ರವರೆಗೆ ಸಂಗೀತ, ಬ್ರಹ್ಮ ಜಿಜ್ಞಾಸೆ, ಶಾಸ್ತ್ರ ಶ್ರವಣ ನಡೆಯಲಿದೆ.
ಮಾ. 1ರಿಂದ ಮಾ. 3ರವರೆಗೆ ಪ್ರತಿದಿನ ಸಂಜೆ 7.30 ಗಂಟೆಗೆ ಕಾರ್ಯಕ್ರಮಗಳು ನಡೆಯಲಿದ್ದು, ಮಾ. 4ರಂದು ಸಪ್ತಾಹ ಸಮಾರೋಪಗೊಳ್ಳಲಿದೆ.
ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯವನ್ನು ಅಣ್ಣಿಗೇರಿ ದಾಸೋಹಮಠದ ಶಿವಕುಮಾರ ಸ್ವಾಮೀಜಿ, ಬನ್ನಿಕೊಪ್ಪದ ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ವರವಿಯ ಮೌನೇಶ್ವರ ಸ್ವಾಮೀಜಿ, ಉದ್ಘಾಟನೆಯನ್ನು ಸಚಿವ ಎಚ್.ಕೆ. ಪಾಟೀಲ ನೆರವೇರಿಸಲಿದ್ದಾರೆ. ಶಾಸಕ ಡಾ. ಚಂದ್ರು ಲಮಾಣಿ, ಸಂಸದ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಜಿ.ಪಂ ಮಾಜಿ ಅಧ್ಯಕ್ಷ ವಿ.ವಿ. ಕಪ್ಪತ್ತನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ ಮುಂತಾದವರು ಉಪಸ್ಥಿತರಿರುವರು ಎಂದು ಶ್ರೀಮಠದ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.



