ಕೋಲಾರ:- ಕೋಲಾರ ತಾಲ್ಲೂಕು ಖಾದ್ರಿಪುರ ಗ್ರಾಮದಲ್ಲಿ ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
36 ವರ್ಷದ ಮೊನೀಶ್ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಇವರು ಕೋಲಾರದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ.
ಪತ್ನಿ ವೇದವತಿ ಕೆಲಸಕ್ಕೆ ಹೋಗಿದ್ದ ವೇಳೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.



