ಗದಗ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಶುಕ್ರವಾರ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ ಕೆ, ಗಣ್ಯರಾದ ಎಸ್.ಎನ್. ಬಳ್ಳಾರಿ, ಸುಜಾತಾ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



