HomeCrime Newsಈರುಳ್ಳಿ ಮಾರಲು ಹೋದ ರೈತ ಸೇರಿ ನಾಲ್ವರ ಸಾವು!

ಈರುಳ್ಳಿ ಮಾರಲು ಹೋದ ರೈತ ಸೇರಿ ನಾಲ್ವರ ಸಾವು!

Spread the love

ಬೆಳ್ಳಂಬೆಳಗ್ಗೆ ಯಮರೂಪಿಯಾದ ಟ್ಯಾಂಕರ್

ವಿಜಯಸಾಕ್ಷಿ ಸುದ್ದಿ,
ಗದಗ/ಕೊಪ್ಪಳ: ಈರುಳ್ಳಿ ಮಾರಲು ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿಯಿಂದ ಬೆಂಗಳೂರಿಗೆ ಹೊರಟಿದ್ದ ರೈತ ಸೇರಿದಂತೆ ನಾಲ್ವರ ಮೇಲೆ ಟ್ಯಾಂಕರ್ ಹರಿದು ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಶನಿವಾರ ಬೆಳಗ್ಗೆ ಚಿತ್ರದುರ್ಗದ ಬಳಿ ಸಂಭವಿಸಿದೆ.

ಮೃತರನ್ನು ರೋಣ ತಾಲೂಕಿನ ಅರಹುಣಸಿಯ ರೈತ ಶರಣಪ್ಪ ಅಳವಂಡಿ, ವಿಜಯಪುರ ಮೂಲದ ಲಾರಿ ಕ್ಲೀನರ್ ಸಂಜಯ್, ಲಿಂಗಸೂಗುರು ತಾಲೂಕಿನ ಬಯಲುಗುಡ್ಡ ಮೂಲದ ಹುಲಗಪ್ಪ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ ಮೂಲದ ಲಾರಿ ಚಾಲಕ ಮಂಜುನಾಥ್ ಬಾದವಾಡಗಿ ಎಂದು ಗುರುತಿಸಲಾಗಿದೆ.

ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ ನಸುಕಿನ‌ ಜಾವ ಟೈರ್ ಪಂಕ್ಚರ್ ಆಗಿದೆ. ಹೆದ್ದಾರಿಯ ಪಕ್ಕದಲ್ಲಿ ಲಾರಿ ನಿಲ್ಲಿಸಿ ಪಂಕ್ಚರ್ ಸರಿಪಡಿಸುವ ಕೆಲಸದಲ್ಲಿ ಲಾರಿಯಲ್ಲಿದ್ದ ಐದು ಜನ ನಿರತರಾಗಿರುವಾಗ ಹಿಂಬದಿಯಿಂದ ಯಮರೂಪಿಯಾಗಿ ಬಂದ ಟ್ಯಾಂಕರ್ ಐವರ ಮೇಲೂ ಹರಿದಿದೆ. ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಓರ್ವನ ಸ್ಥಿತಿ ತೀರಾ ಗಂಭೀರವಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!