ಚಾಮರಾಜನಗರ: ನಿನ್ನೆ ಸುರಿದ ಧಾರಾಕಾರ ಮಳೆ ಚಾಮರಾಜನಗರದ ರೈತರಿಗೆ ಅಪಾರ ನಷ್ಟವನ್ನು ಉಂಟುಮಾಡಿದೆ.
ಸುಮಾರು 300 ಕ್ಕೂ ಹೆಚ್ಚು ಪ್ರದೇಶದ ರೈತರಿಗೆ ಬೆಳೆ ನಷ್ಟವಾಗಿದೆ. ಪ್ರಮುಖವಾಗಿ ಬಾಳೆ, ಮೆಣಸಿನಕಾಯಿ, ಟೊಮ್ಯಾಟೊ ಮತ್ತು ಇತರ ತರಕಾರಿ ಬೆಳೆಗಳು ಹಾನಿಗೀಡಾಗಿವೆ.
ಚಾಮರಾಜನಗರ ತಾಲ್ಲೂಕಿನ ಅಮಚವಾಡಿ, ಕಡುವಿನಕಟ್ಟೆ ಹುಂಡಿ, ವೀರನಪುರ, ನಂಜೇದೇವನಪುರ ಸೇರಿದಂತೆ ಹಲವೆಡೆ ಬಾಳೆ ನೆಲಕ್ಕೆ ಅಪ್ಪಳಿಸಿರುವುದು ವರದಿಯಾಗಿದೆ. ರೈತ ವೀರಭದ್ರನಾಯಕ ಅಮಚವಾಡಿ ಗ್ರಾಮದಲ್ಲಿ ಎರಡು ಎಕರೆ ಪ್ರದೇಶದಲ್ಲಿ ಬಾಳೆ ಬೆಳೆದಿದ್ದರು, ಅದರಲ್ಲಿ ಸುಮಾರು 300 ಕ್ಕೂ ಹೆಚ್ಚು ಕಟ್ಟೆ ಮಳೆ, ಗಾಳಿಗೆ ಉರುಳಿ ಬಿದ್ದಿದೆ. ಇದರಿಂದ ಸಾವಿರಾರು ರೂಪಾಯಿ ನಷ್ಟವಾಗಿದೆ.
ಸೂಕ್ತ ಬೆಳೆ ನಷ್ಟ ಭರಿಸುವಂತೆ ರೈತರು ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಯುಗಾದಿ ಹಬ್ಬದ ಸಂಭ್ರಮದ ಸಮಯದಲ್ಲಿ ಈ ಮಳೆಯು ರೈತರಿಗೆ ಸಾಕಷ್ಟು ಆರ್ಥಿಕ ತೊಂದರೆ ಉಂಟುಮಾಡಿದೆ.



