HomeSports News17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌! ಆದಿತ್ಯಾ ಬಿರ್ಲಾ-ಟೈಮ್ಸ್ ಆಫ್‌ ಇಂಡಿಯಾ ಪಾಲಾದ ಬೆಂಗಳೂರು ತಂಡ!

17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌! ಆದಿತ್ಯಾ ಬಿರ್ಲಾ-ಟೈಮ್ಸ್ ಆಫ್‌ ಇಂಡಿಯಾ ಪಾಲಾದ ಬೆಂಗಳೂರು ತಂಡ!

For Dai;y Updates Join Our whatsapp Group

Spread the love

ಬೆಂಗಳೂರು: ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗ ಹೊಸ ಮಾಲೀಕರ ತೆಕ್ಕೆಗೆ ಜಾರಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು, ಸುಮಾರು 1.78 ಬಿಲಿಯನ್ ಡಾಲರ್ (ಸುಮಾರು 16,779 ಕೋಟಿ ರೂ.) ಮೊತ್ತಕ್ಕೆ ಮಾರಾಟವಾಗಿದ್ದು, ಕ್ರಿಕೆಟ್ ಹೂಡಿಕೆ ಇತಿಹಾಸದಲ್ಲಿ ಹೊಸ ದಾಖಲೆ ಸ್ಥಾಪಿಸಿದೆ.

ಮುಖ್ಯ ಮಾಲೀಕರಾದ ಡಿಯಾಜಿಯೊ ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಹೊಸ ಮಾಲೀಕರಲ್ಲಿ ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಸೇರಿದ್ದಾರೆ.

ನಿರ್ದೇಶಕರ ಘೋಷಣೆಯ ಪ್ರಕಾರ, ಆದಿತ್ಯ ಬಿರ್ಲಾ ಗ್ರೂಪ್‌ನ ಆರ್ಯಮನ್ ವಿಕ್ರಮ್ ಬಿರ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ, ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸತ್ಯನ್ ಗಜ್ವಾನಿ ಫ್ರಾಂಚೈಸಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 2026 ರ 19ನೇ ಐಪಿಎಲ್ ಆವೃತ್ತಿಯ ನಂತರ ಈ ಹೊಸ ಮಾಲೀಕತ್ವ ಅಧಿಕೃತವಾಗಿ ಜಾರಿಗೆ ಬರಲಿದೆ. ಆವರೆಗೆ ಡಿಯಾಜಿಯೊ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ.

2008 ರಲ್ಲಿ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಸ್ಪಿರಿಟ್ಸ್ 111.6 ಮಿಲಿಯನ್ ಡಾಲರ್ (ಸಾವಿರಕ್ಕೂ ಹೆಚ್ಚು ಕೋಟಿ ರೂ.)ಕ್ಕೆ ಆರ್‌ಸಿಬಿಯನ್ನು ಖರೀದಿಸಿತ್ತು. 2012 ರಲ್ಲಿ ಕಿಂಗ್‌ಫಿಶರ್ ಏರ್‌ಲೈನ್ಸ್ ಕಾರ್ಯಾಚರಣೆ ನಿಲ್ಲಿಸಿದಾಗ, ಉದ್ಯಮ ನಷ್ಟದಿಂದ ಯುನೈಟೆಡ್ ಸ್ಪಿರಿಟ್ಸ್ ಡಿಯಾಜಿಯೊಗೆ ಸ್ವಾಧೀನಗೊಂಡಿತು.

18ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಬಳಿಕ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಯುನೈಟೆಡ್ ಸ್ಪಿರಿಟ್ಸ್ ಹೂಡಿಕೆದಾರರು ಆತಂಕ ಹೊರಹಾಕಿದ್ದರು. ಜೊತೆಗೆ ವಿರಾಟ್‌ ಕೊಹ್ಲಿ ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಯಿದೆ. ಕೊಹ್ಲಿ ನಿವೃತ್ತಿ ಹೇಳಿದರೆ ಆರ್‌ಸಿಬಿ ಮೌಲ್ಯ ಕುಸಿಯುವ ಸಾಧ್ಯತೆಯಿದೆ. ಈ ಕಾರಣಕ್ಕೆ ಆರ್‌ಸಿಬಿ ತಂಡವನ್ನ ಯುನೈಟೆಡ್ ಸ್ಪಿರಿಟ್ಸ್ ಮಾರಾಟ ಮಾಡಿದೆ ಎನ್ನಲಾಗ್ತಿದೆ.

ಆರ್‌ಸಿಬಿ ತಂಡವು ಇತ್ತೀಚಿನ ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. 2025ರಲ್ಲಿ ಪುರುಷರ ತಂಡ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿತು. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲೂ ಎರಡು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ವಿರಾಟ್ ಕೊಹ್ಲಿಯಂತಹ ಜಾಗತಿಕ ಸೂಪರ್‌ಸ್ಟಾರ್‌ಗಳನ್ನು ಹೊಂದಿರುವ ಈ ತಂಡಕ್ಕೆ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಂಬಲಾರ್ಹವಾದ ಅಚಲವಾದ ಅಭಿಮಾನಿ ಬಳಗವಿದೆ.

“ಆರ್‌ಸಿಬಿ ಈಗಾಗಲೇ ಐಪಿಎಲ್‌ನ ಅತ್ಯಂತ ಜನಪ್ರಿಯ ಬ್ರ್ಯಾಂಡ್ ಆಗಿದೆ. ನಾವು ಇದನ್ನು ಬೆಂಗಳೂರು ಮತ್ತು ಕರ್ನಾಟಕದ ಬೇರುಗಳಿಗೆ ಹತ್ತಿರವಾಗಿಯೇ ಇರಿಸಿಕೊಂಡು, ಜಾಗತಿಕ ಮಟ್ಟದ ಕ್ರೀಡಾ ಸಂಸ್ಥೆಯನ್ನಾಗಿ ಬೆಳೆಸುವ ಉದ್ದೇಶ ಹೊಂದಿದ್ದೇವೆ” ಎಂದು ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸಿಇಒ ಸತ್ಯನ್ ಗಜ್ವಾನಿ ಮಾತನಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!