Home Bengaluru News ದೇವಸ್ಥಾನ ಮಾಹಿತಿ ಮರೆಮಾಚಿದ ಅಧಿಕಾರಿಗೆ 1 ಲಕ್ಷ ರೂ. ದಂಡ!

ದೇವಸ್ಥಾನ ಮಾಹಿತಿ ಮರೆಮಾಚಿದ ಅಧಿಕಾರಿಗೆ 1 ಲಕ್ಷ ರೂ. ದಂಡ!

0
ದೇವಸ್ಥಾನ ಮಾಹಿತಿ ಮರೆಮಾಚಿದ ಅಧಿಕಾರಿಗೆ 1 ಲಕ್ಷ ರೂ. ದಂಡ!
Spread the love

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಆಡಳಿತ ಮೊಕ್ತೇಸರ ಕೆ.ಪಿ. ಗೋಪಾಲಕೃಷ್ಣರಾವ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಯ ಹಿನ್ನೆಲೆ ಕರ್ನಾಟಕ ಮಾಹಿತಿ ಆಯೋಗವು ನಾಲ್ಕು ಪ್ರಕರಣಗಳಲ್ಲಿ ಒಟ್ಟು ಒಂದು ಲಕ್ಷ ರೂ. ದಂಡ ವಿಧಿಸಿದೆ.

ಜೊತೆಗೆ ಅರ್ಜಿದಾರರಿಗೆ 16 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ಅರ್ಜಿದಾರ ಸೋಮನಾಥ ನಾಯಕ್ ಅವರು ದೇವಾಲಯಕ್ಕೆ ಸಂಬಂಧಿಸಿದ ಮಾಹಿತಿ ಕೋರಿದ್ದರೂ, ಸಂಬಂಧಿತ ಅಧಿಕಾರಿ ವಿಚಾರಣೆಗಳಿಗೆ ಹಾಜರಾಗದೆ ಹಾಗೂ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದರೆಂದು ತಿಳಿದುಬಂದಿದೆ. ಈ ದೇವಾಲಯವು ಮುಜುರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು, ಸರ್ಕಾರದಿಂದ ವಾರ್ಷಿಕ ಅನುದಾನ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಗೊಂಡಿರುವುದರಿಂದ ಮಾಹಿತಿ ನೀಡುವುದು ಕಡ್ಡಾಯವಾಗಿತ್ತು.

ಆಯೋಗದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪ್ರತಿ ಪ್ರಕರಣಕ್ಕೆ 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ಎರಡು ಪ್ರಕರಣಗಳಲ್ಲಿ ತಲಾ 5 ಸಾವಿರ ರೂ. ಹಾಗೂ ಇನ್ನೆರಡು ಪ್ರಕರಣಗಳಲ್ಲಿ ತಲಾ 3 ಸಾವಿರ ರೂ. ಪರಿಹಾರ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ನಿರ್ದೇಶನ ನೀಡಿದ್ದಾರೆ.

ಇದೇ ವೇಳೆ, ದಂಡ ಮೊತ್ತವನ್ನು ಸಂಬಂಧಿತ ಅಧಿಕಾರಿಯ ವೇತನದಿಂದ ವಸೂಲಿ ಮಾಡಿ ಸರ್ಕಾರದ ಖಾತೆಗೆ ಜಮಾ ಮಾಡುವಂತೆ ಉಡುಪಿ ಜಿಲ್ಲೆಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಿಗೆ ಸೂಚಿಸಲಾಗಿದೆ.


Spread the love

LEAVE A REPLY

Please enter your comment!
Please enter your name here