ಕೊಪ್ಪಳ:- ಮಧ್ಯಪ್ರಾಚ್ಯ ಸಂಘರ್ಷದಿಂದ ಪೆಟ್ರೋಲ್-ಡೀಸೆಲ್ ಸಿಗಲ್ಲ ಎಂಬ ವದಂತಿ ಹರಿದಾಡ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂಕ್ ಗಳ ಮುಂದೆ ರಾತ್ರಿಯಿಡಿ ಕ್ಯೂ ನಿಂತು ಜನತೆ ಪೆಟ್ರೋಲ್ ಸ್ಟಾಕ್ ಮಾಡಿಕೊಳ್ತಿದ್ದಾರೆ. ಇದೀಗ ಕೊಪ್ಪಳದಲ್ಲಿಯೂ ಡ್ರಮ್, ಕ್ಯಾನ್ ಗಳಿಗೆ ಡೀಸೆಲ್, ಪೆಟ್ರೋಲ್ ಹಾಕಿಸಿಕೊಂಡು ಸ್ಟಾಕ್ ಮಾಡಲು ಮುಂದಾಗಿದ್ದಾರೆ.
ಗಂಗಾವತಿ ತಾಲ್ಲೂಕಿನ ಪೆಟ್ರೋಲ್ ಬಂಕ್ಗಳಿಗೆ ಜನರು ಡ್ರಮ್, ಕ್ಯಾನ್ ತಂದು, ಹೆಚ್ಚಿನ ಪ್ರಮಾಣದಲ್ಲಿ ಡಿಸೇಲ್ ತುಂಬಿಸಿಕೊಂಡಿದ್ದಾರೆ. ಪೆಟ್ರೋಲ್ ಸಿಬ್ಬಂದಿ ಯಾವುದೇ ಸಮಸ್ಯೆ ಇಲ್ಲ ಅಂತ ಹೇಳುತ್ತಿದ್ದರೂ ಜನ ಮಾತ್ರ ಅದಕ್ಕೆ ಕಿವಿಗೊಡದೆ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳುತ್ತಿದ್ದಾರೆ.
ಸ್ಥಳೀಯ ಅಧಿಕಾರಿಗಳು ಮತ್ತು ಪೆಟ್ರೋಲ್ ಬಂಕ್ ವ್ಯವಸ್ಥಾಪಕರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ, ಜನರನ್ನು ಅಗತ್ಯಕ್ಕಿಂತ ಹೆಚ್ಚಾಗಿ ಸಂಗ್ರಹಿಸಿಕೊಳ್ಳಬೇಡಿ ಎಂದು ಎಚ್ಚರಿಸುತ್ತಿದ್ದಾರೆ.



