ಗದಗ: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಇಂದು ಬೆಳಗಿನ ಜಾವ ಗೃಹೋಪಯೋಗಿ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆ ನಂತರ ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ, ರೋಣ–ಗಜೇಂದ್ರಗಡ ರಸ್ತೆಯಲ್ಲಿ ಪಟ್ಟಣದ ಶೇಖರಯ್ಯ ಅಜ್ಜನ ಮಠದ ಸಮೀಪ ಪಲ್ಟಿಯಾಗಿದೆ. ಗಜೇಂದ್ರಗಡ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ರಸ್ತೆ ಪಕ್ಕದ ಗುಂಡಿಗೆ ಜಾರಿದ್ದು, ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿದೆ. ಈ ವೇಳೆ ಲಾರಿಯಲ್ಲಿ ತುಂಬಿದ್ದ ಅನಿಲ ಸಿಲಿಂಡರ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ಗಳಿಂದ ಸೋರಿಕೆ ಆಗದಿರುವುದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ರೋಣ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



