ಚೆನ್ನೈ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ಹಾಗೂ ಟಿವಿಕೆ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿವಿಕೆ ಮುಖ್ಯಸ್ಥ ವಿಜಯ್ ಸೋಮವಾರ ಚೆನ್ನೈನ ಪೆರಂಬೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ಹಾಗೂ ಬೆಂಬಲಿಗರು ಸೇರಿಕೊಂಡು ಅವರ ವಾಹನವನ್ನು ಹಿಂಬಾಲಿಸಿದ ಪರಿಣಾಮ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಅಸೌಕರ್ಯ ಉಂಟಾಯಿತು.
ಚುನಾವಣಾ ಪ್ರಚಾರಕ್ಕಾಗಿ ಅಧಿಕಾರಿಗಳು ನಿಗದಿಪಡಿಸಿದ್ದ ಸಮಯಕ್ಕಿಂತ ಮುಂಚೆಯೇ ಕಾರ್ಯಕರ್ತರು ಗುಂಪುಗೂಡಿದ್ದು, ಇದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ಮಾದರಿ ನೀತಿ ಸಂಹಿತೆ 2023 ಅಡಿಯಲ್ಲಿ ವಿವಿಧ ಕಲಂಗಳನ್ನು ಬಳಸಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



