ಬಹಿರಂಗ ಪ್ರಚಾರ ಅಂತ್ಯ; ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಸೋಮವಾರ 7 ಗಂಟೆಗೆ ಮತದಾನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 7 ಗಂಟೆಗೆ ಬಹಿರಂ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ವೇಳೆ ಯಾವ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಮಾಡಬಾರದು ಎಂದು ಚುನಾವಣಾ ಆಯೋಗ ಸೂಚಿಸಿದ್ದರು. ಅಭ್ಯರ್ಥಿಗಳು ಮಾತ್ರ ಯಾರ ಭಯವಿಲ್ಲದೇ ಅವಳಿ ನಗರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಈ ಕುರಿತು ಚುನಾವಣೆ ಅಧಿಕಾರಿಗಳಿಗೆ ಪತ್ರ ಬರೆದು ದೂರು‌ ನೀಡಿರುವ 29ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸುಧಾಕರ ವೀರಾಪೂರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದರೂ, ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ನಡೆಸಿದ್ದಾರೆ. ತಕ್ಷಣ ಬಹಿರಂಗ ಪ್ರಚಾರ ನಿಲ್ಲಸದೇ ಹೋದರೆ, ನಾವು ಬಹಿರಂಗ ಪ್ರಚಾರ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು,ಎಂಸಿಸಿ‌ ಅಧಿಕಾರಿಗಳಾದ ಬಿ.ಕಲ್ಲೇಶ್ ಅವರು ಪ್ರತಿಕ್ರಿಯಿಸಿ ‘ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಹೀಗಾಗಿ ಯಾರೂ ಬಹಿರಂಗ ಪ್ರಚಾರ ಮಾಡುವಂತಿಲ್ಲ. ಅವಳಿ‌ ನಗರದ ವಾರ್ಡ್ ನಂ.೨೯ಗೆ ಸಂಬಂಧಿಸಿದ ಆರ್ ಒ ಎನ್.ಟಿ.ನೆಗಳೂರು ಅವರಿಗೆ ಸೂಚಿಸಿಲಾಗಿದೆ. ಅಲ್ಲದೇ, ಸಿಪಿಐ ಅವರ ಗಮನಕ್ಕೂ ತಂದಿದ್ದು ಅವರು ಅಲ್ಲಿಗೆ ಹೋಗಿದ್ದಾರೆ’ ಎಂದು ತಿಳಿಸಿದರು.

’29ನೇ ವಾರ್ಡ್ ನಲ್ಲಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ ಎಂಬುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತನೆ’ ಎಂದು ಬಡಾವಣೆ ಪೊಲೀಸರು ತಿಳಿಸಿದರು.


Spread the love

LEAVE A REPLY

Please enter your comment!
Please enter your name here