HomeHassanಸಿಡಿಲು ಬಡಿದು ವೃದ್ಧೆ ಸಾವು; ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ

ಸಿಡಿಲು ಬಡಿದು ವೃದ್ಧೆ ಸಾವು; ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ

For Dai;y Updates Join Our whatsapp Group

Spread the love

ಹಾಸನ: ಜಿಲ್ಲೆಯಲ್ಲಿ ಮಳೆ-ಗಾಳಿ ತೀವ್ರಗೊಂಡಿರುವ ಹಿನ್ನೆಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು ಐವರು ಸಾವನ್ನಪ್ಪಿರುವ ದುರ್ಘಟನೆಗಳು ಸಂಭವಿಸಿವೆ.

ಆಲೂರು ತಾಲೂಕಿನಲ್ಲಿನ ಘಟನೆಯಲ್ಲಿ, ಜಾನುವಾರು ಮೇಯಿಸಲು ತೆರಳಿದ್ದ ನೀಲಮ್ಮ (70) ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಆಶ್ರಯ ಪಡೆದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ, ಭಾರೀ ಮಳೆ ಮತ್ತು ಬಿರುಗಾಳಿಯಿಂದ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಕಾರೆಹಳ್ಳಿ, ನಾಗರನವಿಲೆ, ಚಿಕ್ಕೋನಹಳ್ಳಿ ಹಾಗೂ ರೇಚಿಹಳ್ಳಿ ರಸ್ತೆಗಳುದ್ದಕ್ಕೂ ಸುಮಾರು 20ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಪರಿಣಾಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಚೆಸ್ಕಾಂ ಸಿಬ್ಬಂದಿ ದಿನಪೂರ್ತಿ ಮರ ತೆರವು ಕಾರ್ಯಾಚರಣೆ ನಡೆಸಿದರು.

ಇದರ ಜೊತೆಗೆ, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಿಲಗುಂದ-ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಜಾನುವಾರುಗಳ ಮೈ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಅಳಿಯ ಪ್ರತೀಕ್ (10) ಮತ್ತು ಮಾವ ಪ್ರಭಾಕರ್ (45) ಈಜು ಬರದೇ ಮುಳುಗಿ ಮೃತಪಟ್ಟಿದ್ದಾರೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರತೀಕ್ ಮಾವನ ಮನೆಗೆ ಬಂದಿದ್ದ ಎನ್ನಲಾಗಿದೆ.

ಮತ್ತೊಂದು ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲೂ ಸಂಭವಿಸಿದ್ದು, ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಳೆಗಾಲದ ಅವಘಡಗಳಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!