HomeBengaluru Newsರಾಜಧಾನಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ರಾಜಧಾನಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಗಾಳಿಯ ಗುಣಮಟ್ಟದಲ್ಲಿ ಭಾಗಶಃ ಸುಧಾರಣೆ ಕಂಡುಬಂದಿದ್ದರೂ, ಕೆಲವು ನಗರಗಳಲ್ಲಿ ಇನ್ನೂ ಅನಾರೋಗ್ಯಕರ ಮಟ್ಟ ಮುಂದುವರಿದಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಏರ್ ಕ್ವಾಲಿಟಿ (AQI) ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಸುಧಾರಣೆ ಕಂಡಿದೆ. ಹುಬ್ಬಳ್ಳಿಯಲ್ಲಿ AQI ಇಂದು 73ರಷ್ಟಿದ್ದು, ಉತ್ತಮ ಮಟ್ಟದಲ್ಲಿದೆ. ಆದರೆ ಬೆಂಗಳೂರಿನಲ್ಲಿ AQI 110ಕ್ಕೆ ತಲುಪಿದರೂ, ಇದು ಇನ್ನೂ ಆರೋಗ್ಯಕ್ಕೆ ಹಾನಿಕರ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಕೆಲ ತಿಂಗಳ ಹಿಂದೆ AQI 200ರ ಗಡಿ ತಲುಪಿದ್ದು ಆತಂಕ ಮೂಡಿಸಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ, WHO ಮಾನದಂಡಗಳ ಪ್ರಕಾರ ಇಂದಿನ ಮಟ್ಟವೂ ಆರೋಗ್ಯಕ್ಕೆ ಸಂಪೂರ್ಣ ಸುರಕ್ಷಿತವಲ್ಲ ಎಂದು ಹೇಳಲಾಗಿದೆ.

ರಾಜ್ಯದ ಇತರ ನಗರಗಳ ಇಂದಿನ ಗಾಳಿಯ ಗುಣಮಟ್ಟ (AQI) ಹೀಗಿದೆ:

ಬೆಂಗಳೂರು – 110
ಮಂಗಳೂರು – 109
ಮೈಸೂರು – 103
ಬೆಳಗಾವಿ – 68
ಕಲಬುರ್ಗಿ – 73
ಶಿವಮೊಗ್ಗ – 92
ಬಳ್ಳಾರಿ – 112
ಹುಬ್ಬಳ್ಳಿ – 73
ಉಡುಪಿ – 132
ವಿಜಯಪುರ – 84

AQI ಮಟ್ಟಗಳ ವಿವರಣೆ:
0–50 : ಉತ್ತಮ
50–100 : ಮಧ್ಯಮ
100–150 : ಕಳಪೆ
150–200 : ಅನಾರೋಗ್ಯಕರ
200–300 : ಗಂಭೀರ
300 ಮೇಲ್ಪಟ್ಟು : ಅಪಾಯಕಾರಿ

ತಜ್ಞರ ಪ್ರಕಾರ, AQI 100ಕ್ಕಿಂತ ಮೇಲ್ಪಟ್ಟಾಗ ದೀರ್ಘಕಾಲ ಬಾಹ್ಯ ವಾತಾವರಣದಲ್ಲಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!