HomeKarnataka Newsಶೃಂಗೇರಿ ಅಂಚೆ ಮತ ಮರುಎಣಿಕೆ ವಿವಾದ: BJP ವಿರುದ್ಧ ‘ವೋಟ್ ಚೋರಿ’ ಆರೋಪ ಮಾಡಿದ ಸಿಎಂ...

ಶೃಂಗೇರಿ ಅಂಚೆ ಮತ ಮರುಎಣಿಕೆ ವಿವಾದ: BJP ವಿರುದ್ಧ ‘ವೋಟ್ ಚೋರಿ’ ಆರೋಪ ಮಾಡಿದ ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಮರುಎಣಿಕೆ ಸಂಬಂಧ ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಸಿದ್ದರಾಮಯ್ಯ ಹೊರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರುಎಣಿಕೆ ಪ್ರಕ್ರಿಯೆಯಲ್ಲಿ “ವೋಟ್ ಚೋರಿ” ನಡೆದಿದೆ ಎಂದು ಆರೋಪಿಸಿದರು.

ಶೃಂಗೇರಿ ಕ್ಷೇತ್ರದಲ್ಲಿ ಕೋರ್ಟ್ ಆದೇಶದ ಮೇರೆಗೆ ಅಂಚೆ ಮತಗಳ ಮರುಎಣಿಕೆ ನಡೆದಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅವರಿಗೆ ಇವಿಎಂನಲ್ಲಿ 59,171 ಮತಗಳು ಹಾಗೂ 569 ಅಂಚೆ ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜೀವರಾಜ್ ಅವರಿಗೆ 58,970 ಇವಿಎಂ ಮತಗಳು ಮತ್ತು 692 ಅಂಚೆ ಮತಗಳು ಲಭಿಸಿದ್ದವು.

ಈ ಫಲಿತಾಂಶವನ್ನು ಚುನಾವಣಾ ಅಧಿಕಾರಿಗಳು ಮಾನ್ಯಗೊಳಿಸಿದ ನಂತರ, ಜೀವರಾಜ್ ಚುನಾವಣಾ ಅಕ್ರಮ ನಡೆದಿದೆ ಎಂದು ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ 2026ರ ಮಾರ್ಚ್ 6ರಂದು ಅರ್ಜಿಯನ್ನು ಪುರಸ್ಕರಿಸಿ, 279 ಅಂಚೆ ಮತಗಳ ಮರುಎಣಿಕೆಗೆ ಆದೇಶ ನೀಡಿತ್ತು.

ಅದನ್ವಯ ಮೇ 2ರಂದು ಮರುಎಣಿಕೆ ನಡೆದಿದ್ದು, ಪರಿಶೀಲನೆ ವೇಳೆ 314 ಮತಗಳು ಮಾತ್ರ ಮಾನ್ಯವಾಗಿವೆ ಎಂದು ತಿಳಿದುಬಂದಿದೆ. ಉಳಿದ 255 ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಈ ಬೆಳವಣಿಗೆ ಕುರಿತು ಪ್ರಶ್ನೆ ಎತ್ತಿದ ಮುಖ್ಯಮಂತ್ರಿ, 2023ರಲ್ಲಿ ಜೀವರಾಜ್ ಅವರಿಗೆ 692 ಅಂಚೆ ಮತಗಳು ಬಂದಿದ್ದರೆ, ಮರುಎಣಿಕೆಯಲ್ಲಿ 690 ಮತಗಳು ಮಾತ್ರ ಲಭಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಆಧರಿಸಿ, ಬಿಜೆಪಿ “ಕ್ರಿಮಿನಲ್ ಪಿತೂರಿ” ಮೂಲಕ ಮತಗಳ ಅಕ್ರಮ ನಡೆಸಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!