ತಮಿಳುನಾಡಿನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ದಳಪತಿ ವಿಜಯ್ ಅವರ ಮೊದಲ ಸಿನಿಮಾ ‘ಜನ ನಾಯಗನ್’ ಬಿಡುಗಡೆಯತ್ತ ವೇಗವಾಗಿ ಸಾಗುತ್ತಿದೆ. ಸಿನಿಮಾ ರಿಲೀಸ್ ವಿಳಂಬವಾಗುತ್ತಿದೆ ಎಂಬ ಚರ್ಚೆಗಳ ನಡುವೆ ನಿರ್ಮಾಪಕ ಕೆ. ವೆಂಕಟ್ ಪ್ರಭು ಮಹತ್ವದ ಅಪ್ಡೇಟ್ ನೀಡಿದ್ದಾರೆ.
‘ಜನ ನಾಯಗನ್’ ಸಿನಿಮಾ ಈಗ ಸೆನ್ಸಾರ್ ಮಂಡಳಿಯ ಅಂತಿಮ ಹಂತದಲ್ಲಿದೆ. “ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಲ್ಲವೂ ಸರಿ ಹೋದರೆ ಇನ್ನೆರಡು ವಾರಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತದೆ” ಎಂದು ವೆಂಕಟ್ ಪ್ರಭು ತಿಳಿಸಿದ್ದಾರೆ.
ಸಿನಿಮಾದ ಟೈಟಲ್ ಕಾರ್ಡ್ನಲ್ಲಿ ‘ಸಿಎಂ ದಳಪತಿ ವಿಜಯ್’ ಎಂದು ಪ್ರದರ್ಶಿಸಲಾಗುತ್ತದೆ ಎನ್ನುವ ಮಾಹಿತಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ರಾಜಕೀಯ ಯಶಸ್ಸಿನ ಬೆನ್ನಲ್ಲೇ ಬರುತ್ತಿರುವ ಈ ಸಿನಿಮಾ ವಿಜಯ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ ತಂದಿದೆ.
ವಿಜಯ್ ಬಗ್ಗೆ ಮಾತನಾಡಿದ ವೆಂಕಟ್ ಪ್ರಭು, “ಅವರು ಜನರ ಬಗ್ಗೆ ನಿಜವಾದ ಕಾಳಜಿ ಇರುವ ವ್ಯಕ್ತಿ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಿದೆ” ಎಂದು ಹೇಳಿದ್ದಾರೆ.
ರಾಜಕೀಯ ನಾಯಕನಾಗಿ ಅಧಿಕಾರಕ್ಕೆ ಬಂದ ತಕ್ಷಣ ಬಿಡುಗಡೆಯಾಗುತ್ತಿರುವ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ ಮೇಲೆ ಭಾರೀ ನಿರೀಕ್ಷೆ ನಿರ್ಮಾಣವಾಗಿದೆ. ಸಿನಿಮಾದ ರಾಜಕೀಯ ಡೈಲಾಗ್ಗಳು ಮತ್ತು ವಿಜಯ್ ಅವರ ಹೊಸ ಇಮೇಜ್ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಸದ್ದು ಮಾಡುವ ಸಾಧ್ಯತೆ ಇದೆ.



