ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಆಲನಹಳ್ಳಿ ನಿವಾಸಿ ವಿನೋದಾ ಮೃತ ರೈತ ಮಹಿಳೆ.
ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯ ಕಾರಣದಿಂದ ಮನೆಗೆ ಕರೆತರಲು ಹೋದ ಸಂದರ್ಭದಲ್ಲೇ ಸಿಡಿಲು ಬಡಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಿಡಿಲಿನ ತೀವ್ರತೆಗೆ ವಿನೋದಾ ಮಾತ್ರವಲ್ಲದೆ ಅವರಿಗೆ ಸೇರಿದ ಎರಡು ಹಸುಗಳು ಕೂಡ ಸ್ಥಳದಲ್ಲೇ ಸಾವನ್ನಪ್ಪಿವೆ.
ಘಟನೆ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದಾರೆ.



