ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ಜಿ.ಎಸ್. ಪಾಟೀಲ ಅಭಿಮಾನಿ ಬಳಗದ ವತಿಯಿಂದ ನರೇಗಲ್ಲ ಪಟ್ಟಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಸಂವಿಧಾನವನ್ನು ಬದಲಿಸುವ ಕುರಿತು ಕೆಲವರು ಮಾತನಾಡುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಅವರು, “ಏಳು ದಶಕಗಳಿಂದ ದೇಶ ಸಂವಿಧಾನದ ಆಶಯದಂತೆ ಬದುಕುತ್ತಿದೆ. ಮುಂದಿನ ಪೀಳಿಗೆಯೂ ಅದನ್ನು ಕಾಪಾಡುವ ಹೊಣೆ ಹೊತ್ತುಕೊಳ್ಳಬೇಕು” ಎಂದು ಹೇಳಿದರು.
ದಲಿತರು, ಹಿಂದುಳಿದವರು ಎನ್ನುವ ಬದಲು ಎಲ್ಲರೂ ಸಮಾನರು ಎಂಬ ಮನೋಭಾವ ಸಮಾಜದಲ್ಲಿ ಬೆಳೆಬೇಕು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ದೇಶದಲ್ಲಿ ಸಮಾನತೆ ಹಾಗೂ ಸಹಬಾಳ್ವೆ ಸಾಧ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿಯ ರಾಜ್ಯ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮೈಲಾರಪ್ಪ ವಿ. ಚಳ್ಳಮರದ ಅವರ ಸಂಘಟನಾ ಶಕ್ತಿಯನ್ನು ಶಾಸಕ ಜಿ.ಎಸ್. ಪಾಟೀಲ ಶ್ಲಾಘಿಸಿದರು.
“ಮೈಲಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಬಂದ ಬಳಿಕ ಮತ್ತಷ್ಟು ಚುರುಕುಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಲಿದ್ದಾರೆ” ಎಂದು ಭರವಸೆ ನೀಡಿದರು.
ರೋಣ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ, “ಸಂವಿಧಾನವೇ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಮಹಿಳೆಯರಿಗೆ ಸಮಾನ ಬದುಕಿನ ಹಕ್ಕು ನೀಡಿದೆ” ಎಂದು ಹೇಳಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ, “ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಪ್ರಜೆಗಳ ಹಕ್ಕುಗಳ ರಕ್ಷಣೆಗೆ ಸಂವಿಧಾನವೇ ಶಕ್ತಿ” ಎಂದರು.
ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ, “ಭ್ರಾತೃತ್ವ ಮತ್ತು ಸಾಮರಸ್ಯವೇ ಸಂವಿಧಾನದ ಆತ್ಮ” ಎಂದು ಹೇಳಿದರು.
ಬಾಗಲಕೋಟೆಯ ಯುವ ಮುಖಂಡ ವಿನಯ ಆರ್. ತಿಮ್ಮಾಪುರ ಮಾತನಾಡಿದರು.
ರೋಣ ಬೂದೀಶ್ವರಮಠದ ಡಾ. ವಿಶ್ವನಾಥ ಮಹಾಸ್ವಾಮಿಗಳು, ರಹಿಮಾನ ಶಾವಲಿ ದರ್ಗಾದ ಸಯ್ಯದ್ ಮಂಜೂರ ಹುಸೇನ ಶ್ಯಾವಲಿ ಶರಣರು, ಇಟಗಿಯ ಶಿವಶರಣ ಗೆದಿಗೆಪ್ಪಜ್ಜನವರು ಹಾಗೂ ಸೂಡಿ ಮರುಳು ಸಿದ್ದೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಸರ್ಕಾರಿ ಸೇವೆಯಲ್ಲಿ ಸಾಧನೆ ಮಾಡಿದ ಮಾದಿಗ ಸಮುದಾಯದವರಿಗೆ ಸನ್ಮಾನ ಹಾಗೂ ಎಸ್ಎಸ್ಎಲ್ಸಿ–ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಜಿ.ಎಸ್. ಪಾಟೀಲರಿಗೆ ‘ಜೈ ಭೀಮ್ ರತ್ನ’ ರಾಜ್ಯ ಪ್ರಶಸ್ತಿ
ದಲಿತರ ಅಭಿವೃದ್ಧಿ, ಯುವಕರಿಗೆ ಉದ್ಯೋಗ ಸೃಷ್ಟಿ, ನೆಲ–ಜಲ ಸಂರಕ್ಷಣೆಗೆ ನೀಡಿದ ಕೊಡುಗೆ ಹಾಗೂ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಂಡಿದ್ದಕ್ಕಾಗಿ ಶಾಸಕ ಜಿ.ಎಸ್. ಪಾಟೀಲ ಅವರಿಗೆ ‘ಜೈ ಭೀಮ್ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬೈಲಪ್ಪ ತಳವಾರ, ಬಿ.ವಿ. ಗೌಡರ, ಅರುಣ ಕುಲಕರ್ಣಿ, ವಿ.ಎ. ಕುಂಬಾರ, ಈಶಯ್ಯ ಕಲ್ಲೂರ, ಹನಮಪ್ಪ ಅಬ್ಬಿಗೆರಿ, ಸುರೇಶ ಹಳ್ಳಿಕೇರಿ ಹಾಗೂ ಚಂದ್ರು ಎಂ. ರಾಥೋಡ್ ಅವರನ್ನು ವಿವಿಧ ಕ್ಷೇತ್ರಗಳ ಸೇವೆಗಾಗಿ ಸನ್ಮಾನಿಸಲಾಯಿತು.
“ಸಂವಿಧಾನದ ತಂಟೆಗೆ ಬರುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ. “ಸಮಾನತೆ ಮತ್ತು ಸಹಬಾಳ್ವೆಗೆ ಡಾ. ಅಂಬೇಡ್ಕರ್ ನೀಡಿದ ಸಂವಿಧಾನವೇ ಬಲ.”
ಜಿ.ಎಸ್. ಪಾಟೀಲ, ಶಾಸಕ



