HomeEntertainmentಜೈಲಿನಲ್ಲೇ ದರ್ಶನ್, ಹೊರಗೆ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್! ವೈರಲ್ ಆಯ್ತು ಮದುವೆ ಕಾರ್ಡ್

ಜೈಲಿನಲ್ಲೇ ದರ್ಶನ್, ಹೊರಗೆ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್! ವೈರಲ್ ಆಯ್ತು ಮದುವೆ ಕಾರ್ಡ್

For Dai;y Updates Join Our whatsapp Group

Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಇಂದು ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಈ ಬಾರಿ ಸಂಭ್ರಮದ ಬದಲು ಭಾವುಕ ಕ್ಷಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ, ಈ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ದಂಪತಿಗೆ ದೂರದಲ್ಲೇ ಕಳೆಯುವಂತಾಗಿದೆ.

ಈ ವಿಶೇಷ ದಿನದಂದು ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದೇ ವೇಳೆ ದರ್ಶನ್-ವಿಜಯಲಕ್ಷ್ಮೀ ಮದುವೆಯ ಹಳೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

2003ರ ಮೇ 19ರಂದು ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಬೆಳಿಗ್ಗೆ 9:10 ರಿಂದ 9:50ರ ಮಿಥುನ ಲಗ್ನದಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮೀ ಸರಳವಾಗಿ ವಿವಾಹವಾಗಿದ್ದರು. ಯಾವುದೇ ಆಡಂಬರವಿಲ್ಲದೆ ನಡೆದಿದ್ದ ಈ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆಯಾಗಿರುವ ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ನಡುವೆ ಪ್ರೀತಿ ಬೆಳೆದು ನಂತರ ಹಿರಿಯರ ಸಮ್ಮುಖದಲ್ಲಿ ಮದುವೆ ನಡೆದಿತ್ತು.

ಈ ದಂಪತಿಗೆ ವಿನೀಶ್ ಹೆಸರಿನ ಮಗನಿದ್ದಾನೆ. ದಾಂಪತ್ಯ ಜೀವನದಲ್ಲಿ ಸಾಕಷ್ಟು ಏರುಪೇರುಗಳನ್ನು ಎದುರಿಸಿದ್ದರೂ, ವಿಜಯಲಕ್ಷ್ಮೀ ಯಾವಾಗಲೂ ದರ್ಶನ್ ಪರ ನಿಂತಿದ್ದಾರೆ. ದರ್ಶನ್ ಕಾನೂನು ಹೋರಾಟದಲ್ಲೂ ಅವರು ಪ್ರಮುಖ ಬೆಂಬಲವಾಗಿದ್ದರು.

ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ದರ್ಶನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಇನ್ನೂ ಒಂದು ವರ್ಷಗಳ ಕಾಲ ಜೈಲು ವಾಸ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿ ದಂಪತಿ ಒಟ್ಟಿಗೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಅವಕಾಶ ಕೈ ತಪ್ಪಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!