HomeSports NewsIPL 2026: ಪಂಜಾಬ್ ಗೆ ಇಂದು ಅಗ್ನಿ ಪರೀಕ್ಷೆ: ಲಕ್ನೋ ವಿರುದ್ಧ ಗೆದ್ದರೆ ಮಾತ್ರ ಪ್ಲೇಆಫ್...

IPL 2026: ಪಂಜಾಬ್ ಗೆ ಇಂದು ಅಗ್ನಿ ಪರೀಕ್ಷೆ: ಲಕ್ನೋ ವಿರುದ್ಧ ಗೆದ್ದರೆ ಮಾತ್ರ ಪ್ಲೇಆಫ್ ಕನಸು ಜೀವಂತ

For Dai;y Updates Join Our whatsapp Group

Spread the love

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ಸತತ ಸೋಲಿನಿಂದ ಒತ್ತಡಕ್ಕೆ ಸಿಲುಕಿರುವ ಶ್ರೇಯಸ್ ಅಯ್ಯರ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ 13 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಪಂಜಾಬ್ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪಂಜಾಬ್ 15 ಅಂಕಗಳೊಂದಿಗೆ 4ನೇ ಸ್ಥಾನಕ್ಕೇರಲಿದೆ.

ಆಗ ರಾಜಸ್ಥಾನ್ ರಾಯಲ್ಸ್ 5ನೇ ಸ್ಥಾನಕ್ಕೆ ಕುಸಿಯಲಿದೆ.ನಂತರ ರಾಜಸ್ಥಾನ್ ತಂಡದ ಕೊನೆಯ ಪಂದ್ಯದ ಫಲಿತಾಂಶದ ಮೇಲೆ ಪಂಜಾಬ್ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ರಾಜಸ್ಥಾನ್ ತನ್ನ ಅಂತಿಮ ಪಂದ್ಯದಲ್ಲಿ ಸೋತರೆ ಪಂಜಾಬ್ ನಾಕೌಟ್ ಹಂತಕ್ಕೇರಲಿದೆ.

ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಪಂಜಾಬ್

ಟೂರ್ನಿಯ ಆರಂಭದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡಿತ್ತು. ಮೊದಲ 7 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದು ಅಂಕ ಲಭಿಸಿತ್ತು.ಆದರೆ ನಂತರ ಪಂಜಾಬ್ ತಂಡದ ಗೆಲುವಿನ ನಾಗಾಲೋಟಕ್ಕೆ ರಾಜಸ್ಥಾನ್ ರಾಯಲ್ಸ್ ಬ್ರೇಕ್ ಹಾಕಿತ್ತು. ಅದಾದ ಬಳಿಕ ಆಡಿದ 6 ಪಂದ್ಯಗಳಲ್ಲೂ ಪಂಜಾಬ್ ಗೆಲುವು ಸಾಧಿಸಲು ವಿಫಲವಾಗಿದೆ.

ಪಿಚ್ ರಿಪೋರ್ಟ್ ಹೇಗಿದೆ?

ಏಕನಾ ಕ್ರಿಕೆಟ್ ಸ್ಟೇಡಿಯಂ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ನೆರವಾಗುವ ಪಿಚ್ ಆಗಿದೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡ 200ಕ್ಕೂ ಹೆಚ್ಚು ರನ್ ಗಳಿಸಿದರೆ ಉತ್ತಮ ಪೈಪೋಟಿ ನೀಡಲು ಸಾಧ್ಯವಾಗುತ್ತದೆ.

ಇಲ್ಲದಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲವಾಗುವ ಸಾಧ್ಯತೆ ಹೆಚ್ಚು. ವೇಗದ ಬೌಲರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಹೆಚ್ಚು ಪ್ರಭಾವ ಬೀರುವ ನಿರೀಕ್ಷೆಯಿದ್ದು, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆ ಇದೆ.

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ತಂಡ

ಅರ್ಶಿನ್ ಕುಲಕರ್ಣಿ, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ.

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ
ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಸಿಂಗ್, ಬ್ರಾಕ್, ಎಫ್ ಬ್ರಾಕ್, ಯುಜ್ವೇಂದ್ರ ಚಹಲ್.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!