ಕೊಪ್ಪಳ/ಬೀದರ್: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಸಿಡಿಲು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಬೀದರ್ ಜಿಲ್ಲೆಯಲ್ಲಿ ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ, ಔರಾದ್ ಸೇರಿದಂತೆ ಹಲವು ಭಾಗಗಳಲ್ಲಿ ಒಂದು ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ಸಿಡಿಲು ಹಾಗೂ ಬಿರುಗಾಳಿಯ ಅಬ್ಬರದಿಂದ ಜನರು ಕೆಲಕಾಲ ಆತಂಕಗೊಂಡರೂ, ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತಂಪು ನೀಡಿದೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತ ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ಮುಂಗಾರು ಪೂರ್ವ ಮಳೆಯ ಅಬ್ಬರ ಕಂಡುಬಂದಿದೆ. ಕಾರಟಗಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವೆಡೆ ರಸ್ತೆಗಳು ತಾತ್ಕಾಲಿಕವಾಗಿ ನೀರಿನಿಂದ ತುಂಬಿರುವ ದೃಶ್ಯ ಕಂಡುಬಂದಿದೆ.



