ಧಾರವಾಡ ಗ್ರಾಮೀಣ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಇರ್ಷಾದ್ ಅಹ್ಮದ್ ನೇಮಕ

ವಿಜಯಸಾಕ್ಷಿ ಸುದ್ದಿ, ಧಾರವಾಡ:
ಜಿಲ್ಲೆಯ ಸಂಶಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಮಾಜಿ ವಕ್ಫ ಮತ್ತು ಹಜ್ ಮಂಡಳಿಯ ನಾಮನಿರ್ದೇಶಿತ ಸದಸ್ಯ ಇರ್ಷಾದ ಅಹ್ಮದ್ ಮುಲ್ಲಾ ಅವರು ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube ಅನುಸರಿಸಿ