HomeKarnataka Newsಒಂದು ಚಿರತೆ ಸೆರೆ ಬಳಿಕ ಮತ್ತೊಂದು ಚಿರತೆ ಭೀತಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಒಂದು ಚಿರತೆ ಸೆರೆ ಬಳಿಕ ಮತ್ತೊಂದು ಚಿರತೆ ಭೀತಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

For Dai;y Updates Join Our whatsapp Group

Spread the love

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಸಮೀಪದ ಪ್ರದೇಶಗಳಲ್ಲಿ ಚಿರತೆ ಭೀತಿ ಮತ್ತೆ ಹೆಚ್ಚಾಗಿದೆ. ಇಂಡಿಗನತ್ತ ಗ್ರಾಮದ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ನಿನ್ನೆಯಷ್ಟೇ ಚಿರತೆ ಬಿದ್ದಿದ್ದರೂ, ಅದರ ಬೆನ್ನಲ್ಲೇ ನಾಗಮಲೆ ಗ್ರಾಮದಲ್ಲಿ ಮತ್ತೊಮ್ಮೆ ಚಿರತೆ ದಾಳಿ ನಡೆಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆಯೊಂದು ಬಲಿಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇಂಡಿಗನತ್ತ ಗ್ರಾಮದಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ನಾಗಮಲೆ ಭಾಗದಲ್ಲಿ ಚಿರತೆ ಸಂಚಾರ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚೆಗೆ ಇಂಡಿಗನತ್ತ ಗ್ರಾಮದ ಸಮೀಪ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿದಿತ್ತು. ಆದರೆ ಬೋನಿಗೆ ಬಿದ್ದಿರುವ ಚಿರತೆಯೇ ನಾಗಮಲೆ ಮಾರ್ಗ ಮಧ್ಯದಲ್ಲಿ ಬೆಂಗಳೂರು ಮೂಲದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯೋ ಅಥವಾ ಮತ್ತೊಂದು ಚಿರತೆಯೋ ಎಂಬ ಅನುಮಾನ ಇನ್ನೂ ನಿವಾರಣೆಯಾಗಿಲ್ಲ.

ಈ ನಡುವೆ ಮತ್ತೊಮ್ಮೆ ಚಿರತೆ ದಾಳಿ ನಡೆಸಿ ಮೇಕೆಯನ್ನು ಕೊಂದಿರುವ ಘಟನೆ ಗ್ರಾಮಸ್ಥರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಪ್ರದೇಶದಲ್ಲಿ ಅರಣ್ಯ ಇಲಾಖೆ ತೀವ್ರ ನಿಗಾವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!