HomeWorld Newsಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ ಗೆ ಸಿಂಗಾಪುರ ಕೋರ್ಟ್ ನಿಂದ 6 ತಿಂಗಳ ಜೈಲು ಶಿಕ್ಷೆ!

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ ಗೆ ಸಿಂಗಾಪುರ ಕೋರ್ಟ್ ನಿಂದ 6 ತಿಂಗಳ ಜೈಲು ಶಿಕ್ಷೆ!

For Dai;y Updates Join Our whatsapp Group

Spread the love

ಸಿಂಗಾಪುರದಲ್ಲಿ ಬೈಜೂಸ್ (BYJU’S) ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್‌ಗೆ ಸಂಬಂಧಿಸಿದ ಒಪ್ಪಂದ ಉಲ್ಲಂಘನೆ ಹಾಗೂ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ತೀರ್ಪು ಪ್ರಕಟವಾಗಿದೆ.

ಆಸ್ತಿ ವಿವರಗಳನ್ನು ಬಹಿರಂಗಪಡಿಸುವ ಕುರಿತು 2024ರ ಏಪ್ರಿಲ್‌ನಿಂದ ನ್ಯಾಯಾಲಯ ನೀಡಿದ್ದ ಹಲವು ಆದೇಶಗಳನ್ನು ಅವರು ಪಾಲಿಸದೆ ಉಲ್ಲಂಘಿಸಿದ ಕಾರಣ ಈ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಾಲಯವು ಬೈಜು ರವೀಂದ್ರನ್ ಅವರು ಯಾವುದೇ ವಿಳಂಬ ಅಥವಾ ನೆಪವಿಲ್ಲದೆ ತಕ್ಷಣವೇ ಸಿಂಗಾಪುರದ ಸಂಬಂಧಿತ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಖಡಕ್ ಆದೇಶ ನೀಡಿದೆ. ಜೊತೆಗೆ ಕಾನೂನು ವೆಚ್ಚವಾಗಿ ಸುಮಾರು 90,000 ಸಿಂಗಾಪುರ ಡಾಲರ್ (ಅಂದಾಜು ₹67.47 ಲಕ್ಷ) ಪಾವತಿಸುವಂತೆ ಸೂಚಿಸಿದೆ.

ಹೂಡಿಕೆದಾರರ ಹಣದ ದುರುಪಯೋಗ ಮತ್ತು ಆಸ್ತಿ ವಿವರಗಳನ್ನು ಅಂತರರಾಷ್ಟ್ರೀಯ ನ್ಯಾಯಾಲಯಗಳಿಂದ ಮುಚ್ಚಿಡಲು ಪ್ರಯತ್ನಿಸಿದ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ವೈಯಕ್ತಿಕ ಹಾಗೂ ಕಂಪನಿಯ ಆಸ್ತಿ ವಿವರಗಳನ್ನು ಬಹಿರಂಗಪಡಿಸುವಂತೆ ನೀಡಿದ್ದ ಹಲವು ಆದೇಶಗಳನ್ನು ಅವರು ನಿರಂತರವಾಗಿ ನಿರ್ಲಕ್ಷಿಸಿದ್ದಾರೆ ಎಂದು ಕೂಡ ನ್ಯಾಯಾಲಯ ಗಮನಿಸಿದೆ.

ಕಾನೂನು ಪ್ರಕ್ರಿಯೆಗಳಿಂದ ತಪ್ಪಿಸಿಕೊಳ್ಳಲು ಮತ್ತು ಮಾಹಿತಿಯನ್ನು ಮುಚ್ಚಿಡಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ ಎಂದು ನ್ಯಾಯಾಲಯ ಗಂಭೀರವಾಗಿ ಟೀಕಿಸಿದೆ.

ಈ ನಡುವೆ, ವಿದೇಶಿ ಹೂಡಿಕೆದಾರರು ಮತ್ತು ಸಾಲದಾತರು ತಮ್ಮ ನಷ್ಟವನ್ನು ವಸೂಲಿಸಲು ವಿವಿಧ ದೇಶಗಳಲ್ಲಿ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆಯೂ ಅಮೆರಿಕದ ನ್ಯಾಯಾಲಯವು ಆದೇಶ ಉಲ್ಲಂಘನೆಯ ಹಿನ್ನೆಲೆಯಲ್ಲಿ ಬೈಜು ರವೀಂದ್ರನ್ ಅವರಿಗೆ ಭಾರಿ ದಂಡ ವಿಧಿಸಿದ್ದುದನ್ನು ಗಮನಿಸಬಹುದು.

ಭಾರತದ ಜಾರಿ ನಿರ್ದೇಶನಾಲಯವು ಕೂಡ ಬೈಜೂಸ್ ಸಂಸ್ಥೆಯ ವಿದೇಶಿ ಹಣಕಾಸು ವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿದ್ದು, ಸುಮಾರು ₹9,000 ಕೋಟಿಗೂ ಹೆಚ್ಚು ಮೊತ್ತದ FEMA ನಿಯಮ ಉಲ್ಲಂಘನೆ ಆರೋಪಗಳಿವೆ ಎಂದು ವರದಿಯಾಗಿದೆ. ಕಂಪನಿಯ ಆದಾಯವನ್ನು ಹೆಚ್ಚಾಗಿ ತೋರಿಸಿ ಹೂಡಿಕೆದಾರರನ್ನು ಆಕರ್ಷಿಸಲು ಸುಳ್ಳು ಲೆಕ್ಕಪತ್ರಗಳನ್ನು ಸೃಷ್ಟಿಸಿದ ಆರೋಪವೂ ತನಿಖೆಯಲ್ಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!