ಬೆಂಗಳೂರಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45 ವರ್ಷಗಳ ಸಂಭ್ರಮಾಚರಣೆ ಭವ್ಯವಾಗಿ ನಡೆಯಿತು. ಕನಕಪುರ ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೇಶದ ಚಿತ್ರರಂಗದ ಪ್ರಮುಖ ತಾರೆಯರು, ನಿರ್ದೇಶಕರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಿದರು.
ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಸೇವಾ ಕಾರ್ಯಗಳನ್ನು ಗೌರವಿಸಲು ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ನಿರ್ದೇಶಕ ರಾಜ್ ಕುಮಾರ್ ಹಿರಾನಿ, ನಟ ವಿಕ್ರಾಂತ್ ಮಾಸ್ಸಿ, ಹಾಸ್ಯನಟ ಸುನಿಲ್ ಗ್ರೋವರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಕ್ರಾಂತ್ ಮಾಸ್ಸಿ ಅವರು ಗುರೂಜಿ ಅವರ ಜೀವನಾಧಾರಿತ ‘ವೈಟ್’ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿ ಭಾವುಕರಾದರೆ, ರಾಜ್ ಕುಮಾರ್ ಹಿರಾನಿ ಅವರು ತಮ್ಮ ತಂಡಕ್ಕೆ ಸುದರ್ಶನ ಕ್ರಿಯೆ ಕಲಿಸುವ ಅನುಭವವನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಗುರೂಜಿ ಅವರ ಮಾನವೀಯ ಕಾರ್ಯವನ್ನು ಶ್ಲಾಘಿಸಿದರು. ವಿಶೇಷವಾಗಿ ನಡೆದ ‘ಇಂಟ್ಯೂಷನ್ ಫೆಸ್ಟ್’ನಲ್ಲಿ ಸಾವಿರಾರು ಮಕ್ಕಳು ಭಾಗವಹಿಸಿ ತಮ್ಮ ವಿಶಿಷ್ಟ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆ ತಂದರು.



