ಹೊಟೇಲ್ ರಾಯಲ್ ವಿಲ್ಲಾ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; ಬಿಜೆಪಿ ಯುವ ಮುಖಂಡ ಬಂಧನ

0
Spread the love

ನರ್ಸಿಂಗ್ ಹುದ್ದೆ ಕೊಡಿಸುತ್ತೇನೆಂದು 90 ಸಾವಿರ ಹಣ ಪಡೆಯುವಾಗ ರಮೇಶ್ ಸಜ್ಜಗಾರ ವಶಕ್ಕೆ ಪಡೆದು ವಿಚಾರಣೆ

Advertisement

ವಿಜಯಸಾಕ್ಷಿ ಸುದ್ದಿ, ಗದಗ:

ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಜಿಲ್ಲಾ ಬಿಜೆಪಿ ಯುವ ಮುಖಂಡನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಬುಧವಾರ ಗದಗನ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗಿರುವ ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಯುವ ಮುಖಂಡ ರಮೇಶ್ ಸಜ್ಜಗಾರ ಹಣ ತೆಗೆದುಕೊಳ್ಳುತ್ತಿದ್ದಾಗ ಎಸಿಬಿ ಪೊಲೀಸರ ಕೈಯಲ್ಲಿ ತಗಲು ಹಾಕಿಕೊಂಡಿದ್ದಾನೆ.

ಗದಗನ ಜಿಲ್ಲೆಯ ಮುಂಡರಗಿ ಅಥವಾ ಡಂಬಳದ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡಿಸುತ್ತೇನೆ ಅಂತಾ ಡಂಬಳದ ಈರಯ್ಯ ಕರವೀರಮಠ ಎಂಬುವರ ಪತ್ನಿಗೆ ಒಂದು‌ ಲಕ್ಷ ರೂ. ಬೇಡಿಕೆ ಇಟ್ಟಿದ್ದನಂತೆ. ಅದರಲ್ಲಿ ಇವತ್ತು ಹೊಟೇಲ್ ರಾಯಲ್ ವಿಲ್ಲಾದಲ್ಲಿ 90 ಸಾವಿರ ರೂ. ಪಡೆದುಕೊಳ್ಳುತ್ತಿದ್ದಾಗ ಎಸಿಬಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಬಿ ಎಸ್ ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಎಮ್ ವಿ ಮಲ್ಲಾಪೂರ, ಸುರೇಶ್ ರೆಡ್ಡಿ ಅವರ ನೇತೃತ್ವದಲ್ಲಿ, ಗದಗ ಎಸಿಬಿ ಇನ್ಸ್‌ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೀರಣ್ಣ ಹಳ್ಳಿ, ಸಿಬ್ಬಂದಿಗಳಾದ ಎಮ್ ಎಮ್ ಅಯ್ಯನಗೌಡ್ರ, ವೀರೇಶ್ ಜೋಳದ, ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ, ಮಂಜುನಾಥ್ ಮುಳಗುಂದ, ವೀರೇಶ್ ಬಿಸನಳ್ಳಿ, ನಾರಾಯಣರಡ್ಡಿ ವೆಂಕರಡ್ಡಿ ಹಾಗೂ ತಾರಪ್ಪ ಈ ಕಾರ್ಯಾಚರಣೆಯಲ್ಲಿದ್ದರು.


Spread the love

LEAVE A REPLY

Please enter your comment!
Please enter your name here