ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕಿನ ಸಮಾಜ ಬಾಂಧವರ ಸಹಕಾರದೊಂದಿಗೆ ರಾಜ್ಯ ಮಟ್ಟದ ವಧು-ವರರ ಉಚಿತ ಸಮಾವೇಶವನ್ನು ಜೂನ್ 14, 2026ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗಾಣಿಗ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಗದಗ ಜಿಲ್ಲಾ ಗಾಣಿಗ ಸಂಘವು ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಈಗಾಗಲೇ ಅನೇಕ ರಾಜ್ಯ ಮಟ್ಟದ ವಧು-ವರರ ಸಮಾವೇಶಗಳನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟಿದೆ.
ಇಂದಿನ ಸಾಮಾಜಿಕ ಪರಿಸ್ಥಿತಿಯಲ್ಲಿ ವಧು-ವರರ ಸಮಾವೇಶಗಳು ಸಮಾಜ ಬಾಂಧವರಿಗೆ ಅತ್ಯಂತ ಉಪಯುಕ್ತವಾಗಿದ್ದು, ಯುವಜನರ ಭವಿಷ್ಯ ರೂಪಿಸುವ ಸೇತುವೆಯಾಗಿ ಪರಿಣಮಿಸಿವೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸಮಾವೇಶದಲ್ಲಿ ಭಾಗವಹಿಸಲು ಇಚ್ಛಿಸುವ ಗಾಣಿಗ ಸಮಾಜದ ವಧು-ವರರು ಜೂನ್ 10, 2026ರೊಳಗಾಗಿ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಬಯೋಡೇಟಾ ಸಹಿತ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಸಮಾವೇಶದಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಧು-ವರರೊಂದಿಗೆ ಇಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741648546, 9591066921, 9880369245, 9448103739 ಸಂಪರ್ಕಿಸಬಹುದು ಎಂದು ಟ್ರಸ್ಟ್ ಅಧ್ಯಕ್ಷ ಬಸವರಾಜ ಬಿಂಗಿ ಹಾಗೂ ಕಾರ್ಯದರ್ಶಿ ಮುರುಗೇಶ ಬಡ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



