HomeKarnataka Newsನೀರಿನಲ್ಲಿ ಮುಳುಗಿ ಮೃತಪಟ್ಟ ಮಗು; ಉಪ್ಪಿನಲ್ಲಿ ಇಟ್ಟು ಜೀವ ಉಳಿಸಲು ಪೋಷಕರ ಪ್ರಯತ್ನ!

ನೀರಿನಲ್ಲಿ ಮುಳುಗಿ ಮೃತಪಟ್ಟ ಮಗು; ಉಪ್ಪಿನಲ್ಲಿ ಇಟ್ಟು ಜೀವ ಉಳಿಸಲು ಪೋಷಕರ ಪ್ರಯತ್ನ!

For Dai;y Updates Join Our whatsapp Group

Spread the love

ಬಾಗಲಕೋಟೆ: ಎದುರಿನ ಮನೆಯ ನೀರಿನ ಸಂಪ್‌ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್-38ರಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಆಟವಾಡುತ್ತಿದ್ದ ವೇಳೆ ಮಗು ನೀರಿನ ಸಂಪ್‌ಗೆ ಬಿದ್ದಿದ್ದು, ಮುಳುಗಿದ ಪರಿಣಾಮ ಮೃತಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಳಿಕ ದುಃಖದಲ್ಲಿ ಮುಳುಗಿದ್ದ ಕುಟುಂಬಸ್ಥರು, ನೀರಿನಲ್ಲಿ ಮುಳುಗಿದವರನ್ನು ಉಪ್ಪಿನಲ್ಲಿ ಮಲಗಿಸಿದರೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಮಗುವನ್ನು ಬದುಕಿಸಲು ಪ್ರಯತ್ನ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದ ಮುಂಭಾಗದಲ್ಲಿ ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು.

ಅಲ್ಲದೆ, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪಠಣವನ್ನು ಹಾಕಿ, ಮಗು ಬದುಕಿ ಬರಲಿ ಎಂದು ಪೋಷಕರು ಹಾಗೂ ಕುಟುಂಬಸ್ಥರು ಪ್ರಾರ್ಥನೆ ಸಲ್ಲಿಸಿದರು. ಈ ದೃಶ್ಯ ಅಲ್ಲಿದ್ದವರ ಮನಕಲಕುವಂತೆ ಮಾಡಿತು.

ಸುಮಾರು ಎರಡು ಗಂಟೆಗಳ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು. ಬಳಿಕ ವೈದ್ಯರು ಕುಟುಂಬಸ್ಥರಿಗೆ ಸೂಕ್ತ ಮಾಹಿತಿ ಹಾಗೂ ಮನವರಿಕೆ ಮಾಡಿಕೊಟ್ಟ ನಂತರ ಮಗುವನ್ನು ಉಪ್ಪಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ಪಡೆಯಲಾಯಿತು.

ನಂತರ ಮಗುವಿನ ಮೃತದೇಹವನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!