HomeGadag Newsಫೆ.4ರಂದು ಗದಗ ಬಂದ್!

ಫೆ.4ರಂದು ಗದಗ ಬಂದ್!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ಗಣರಾಜ್ಯೋತ್ಸವದಂದು ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ವಿವಿಧ ಪ್ರಗತಿಪರ ‌ಸಂಘಟನೆಗಳು ಫೆ.4 ರಂದು ಗದಗ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಯ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಚವ್ಹಾಣ ತಿಳಿಸಿದರು.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ‌ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆಂದು ಸಂವಿಧಾನಿಕ ಹುದ್ದೆಯಲ್ಲಿರುವ ಮಲ್ಲಿಕಾರ್ಜುನ್ ಅವರೇ ಹೇಳಿರುವುದು ಖಂಡನೀಯ. ಅಲ್ಲದೇ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸುತ್ತಿರುವುದು ದುಃಖಕರ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರು ಯಾವತ್ತೂ ಒಂದು ಜಾತಿಗೆ ಸೀಮಿತವಾಗಿರಲಿಲ್ಲ. ದೇಶದ ಎಲ್ಲ ವರ್ಗಕ್ಕೂ ಸಂವಿಧಾನದ ಮೂಲಕ ನ್ಯಾಯ ಒದಗಿಸಿದ್ದಾರೆ.
ಸ್ವತಂತ್ರ ನಂತರ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಕ್ಕಿದೆ. ಸಮಾನ ಹಕ್ಕು ಸಿಕ್ಕಿದೆ. ಆದರೆ, ಅಂತಹ ಮಹಾನ್ ವ್ಯಕ್ತಿಯನ್ನು ದೇಶದಲ್ಲಿ ಅಗೌರವದಿಂದ ಕಾಣಲಾಗುತ್ತಿದೆ‌ ಎಂದರು.

ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾಜರ್ಜುನಗೌಡ ಅವರನ್ನು ವಜಾಗೊಳಿಸುವಂತೆ, ಕಾನೂನು ಕೈಗೊಳ್ಳುವಂತೆ ರಾಜ್ಯಾದ್ಯಂತ ಅನೇಕ ಪ್ರಗತಿಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದರೂ ಈ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ ದುರ್ದೈವದ ಸಂಗತಿ. ಹೀಗಾಗಿ ಶೀಘ್ರವೇ ಜಿಲ್ಲಾ ನ್ಯಾಯಾಧೀಶರ ಮೇಲೆ ಸೂಕ್ತ ‌ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಘಟನೆ ಖಂಡಿಸಿ ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಗದಗ ಬಂದ್ ಇರಲಿದೆ. ಹೀಗಾಗಿ ಬಂದ್ ಗೆ ಬೆಂಬಲ ನೀಡುವಂತೆ ಅನೇಕ ಸಂಘಟನೆಗಳ‌ ಮುಖಂಡರಿಗೆ ಮನವಿ ಮಾಡಲಾಗಿದ್ದು,‌ ನೀಡುವುದಾಗಿ ಭರವಸೆ ನೀಡಿದ್ದಾರೆ. ಅವಳಿ‌ ನಗರದ ಜನರು ಸಹಿತ ಬಂದ್ ಹೋರಾಟಕ್ಕೆ ಸಹಕಾರ‌ ನೀಡಿ ಯಶಸ್ವಿಗೊಳಿಸಬೇಕು ಎಂದು ಚಂದ್ರಕಾಂತ ಮನವಿ‌ ಮಾಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ವಿಕಾಸ, ಮುಕ್ತಂಸಾಬ್ ನರಗುಂದ, ರಫೀಕ್ ತೋರಗಲ್, ಬಸವರಾಜ್ ಬಂಕದ, ಈಶ್ವರ ಲಕ್ಷ್ಮೇಶ್ವರ, ಬಾಷಾಸಾಬ್ ಮಲ್ಲಸಮುದ್ರ ಸೇರಿದಂತೆ ಅನೇಕರು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!