HomeCrime Newsಕೋಲಾರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

ಕೋಲಾರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

For Dai;y Updates Join Our whatsapp Group

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪತಿ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಸಮೀಪ ನಡೆದಿದೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ 21 ವರ್ಷದ ಯೋಗಿನಿ ಮೃತ ಯುವತಿ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿ ಮೂಲದ ಗಣೇಶ್ ಎಂಬಾತ ಹತ್ಯೆ ಆರೋಪಿಯಾಗಿದ್ದು, ಘಟನೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಯೋಗಿನಿ ಮತ್ತು ಗಣೇಶ್ ಸುಮಾರು ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯ ಬಳಿಕ ದಂಪತಿ ಜೀವನ ಸಾಗಿಸುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಪತ್ನಿಯ ಮೇಲೆ ಅನುಮಾನಗೊಂಡಿದ್ದ ಗಣೇಶ್ ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

ಯೋಗಿನಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಘಟನೆಯ ದಿನ ಪತ್ನಿಯೊಂದಿಗೆ ವಾಗ್ವಾದ ನಡೆಸಿದ ಗಣೇಶ್, ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯೋಗಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಮಾಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು, ಹತ್ಯೆಯ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ಆಯಾಮಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img