HomeGadag Newsಗಜೇಂದ್ರಗಡ ಮಹಾಸಭೆಗೆ ನೂತನ ಸಾರಥಿಗಳು

ಗಜೇಂದ್ರಗಡ ಮಹಾಸಭೆಗೆ ನೂತನ ಸಾರಥಿಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಶಿವಕುಮಾರ ಶಶಿಮಠ ಹಾಗೂ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಗೀತಾ ಶಶಿಧರ ವಾಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಮೈಸೂರುಮಠದಲ್ಲಿ ಸೋಮವಾರ ಜರುಗಿದ ಮಹಾಸಭೆಯ ತಾಲೂಕು ಘಟಕದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನ ಯುವ ಘಟಕದ ಅಧ್ಯಕ್ಷ ಶಿವಕುಮಾರ ಶಶಿಮಠ ಮಾತನಾಡಿ, ತಾಲೂಕಿನಲ್ಲಿ ಯುವಕರನ್ನು ಸಂಘಟಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಹಿರಿಯರ ಮಾರ್ಗದರ್ಶನದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಿ ಸಮಾಜದ ಸಂಘಟನಾತ್ಮಕ ಬಲ ಹೆಚ್ಚಿಸಲಾಗುವುದು ಎಂದು ಹೇಳಿದರು.

ನೂತನ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ವಾಲಿ, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಜಾಲಿಹಾಳ, ತಾಲೂಕು ಘಟಕದ ಅಧ್ಯಕ್ಷ ಪ್ರಭು ಚವಡಿ ಹಾಗೂ ಪ್ರಧಾನ ಕಾರ್ಯದರ್ಶಿ ಬಸವರಾಜ ಶೀಲವಂತರ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಲಹಾ ಸಮಿತಿ ಸದಸ್ಯರಾದ ಡಾ. ಬಿ.ವಿ. ಕಂಬಳ್ಯಾಳ, ಟಿ.ಎಸ್. ರಾಜೂರ, ಬಿ.ಎಂ. ಸಜ್ಜನರ, ಗುರುಸಿದ್ದಯ್ಯ ಸೂಗಿರಯ್ಯನಮಠ, ಯುವ ಘಟಕದ ನಿರ್ದೇಶಕ ಸಿದ್ದು ಗೊಂಗಡಶೆಟ್ಟಿಮಠ ಸೇರಿದಂತೆ ಸಮಾಜದ ಅನೇಕ ಮುಖಂಡರು, ಮಹಿಳೆಯರು ಹಾಗೂ ಯುವಕರು ಉಪಸ್ಥಿತರಿದ್ದರು.

ಸಭೆಯಲ್ಲಿ ನೂತನ ಅಧ್ಯಕ್ಷ ಶಿವಕುಮಾರ ಶಶಿಮಠ ಅವರನ್ನು ಮಹಾಸಭೆಯ ವತಿಯಿಂದ ಸನ್ಮಾನಿಸಲಾಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!