HomeSports NewsRishabh Pant: ಲಕ್ನೋ ತೊರೆದು ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ʼಗೆ ಮರಳಿದ ರಿಷಭ್ ಪಂತ್!

Rishabh Pant: ಲಕ್ನೋ ತೊರೆದು ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ʼಗೆ ಮರಳಿದ ರಿಷಭ್ ಪಂತ್!

For Dai;y Updates Join Our whatsapp Group

Spread the love

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಕ್ತಾಯವಾದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ರಿಷಭ್ ಪಂತ್ ಇದೀಗ ಅಧಿಕೃತವಾಗಿ ತಂಡಕ್ಕೂ ವಿದಾಯ ಹೇಳಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮಹತ್ವದ ಟ್ರೇಡ್ ಒಪ್ಪಂದದ ಮೂಲಕ ಪಂತ್ ಮತ್ತೆ ತಮ್ಮ ಹಳೆಯ ತಂಡ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸೇರ್ಪಡೆಯಾಗಿದ್ದಾರೆ.

ಈ ಟ್ರೇಡ್ ಒಪ್ಪಂದದ ಭಾಗವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಷಭ್ ಪಂತ್ ಅವರನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದ್ದು, ಪ್ರತಿಯಾಗಿ ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ವರ್ಗಾಯಿಸಿದೆ.

ಲಕ್ನೋ ತಂಡದಲ್ಲಿ ದಾಖಲೆ ಮೊತ್ತವಾದ ₹27 ಕೋಟಿ ಸಂಬಳ ಪಡೆಯುತ್ತಿದ್ದ ರಿಷಭ್ ಪಂತ್, ಇದೀಗ ಸುಮಾರು ₹12 ಕೋಟಿ ಕಡಿತದೊಂದಿಗೆ ₹15 ಕೋಟಿ ವೇತನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಮತ್ತೊಂದೆಡೆ, ಕುಲ್ದೀಪ್ ಯಾದವ್ ಅವರು ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಪಡೆಯುತ್ತಿದ್ದ ₹13.50 ಕೋಟಿ ಸಂಬಳದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ವರ್ಗಾವಣೆಗೊಂಡಿದ್ದಾರೆ.

ರಿಷಭ್ ಪಂತ್ ನಾಯಕತ್ವ ತೊರೆದ ಸಂದರ್ಭದಲ್ಲಿ ಅದು ಅವರ ವೈಯಕ್ತಿಕ ನಿರ್ಧಾರ ಎಂದು ಲಕ್ನೋ ಫ್ರಾಂಚೈಸಿ ಸ್ಪಷ್ಟಪಡಿಸಿತ್ತು. ಆದರೆ ಇದೀಗ ಹೊರಬಿದ್ದಿರುವ ವರದಿಗಳ ಪ್ರಕಾರ, ಫ್ರಾಂಚೈಸಿಯ ಒತ್ತಡದ ಕಾರಣದಿಂದಲೇ ಪಂತ್ ನಾಯಕತ್ವಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಆದಾಗ್ಯೂ, ಈ ಕುರಿತು ಅಧಿಕೃತವಾಗಿ ಯಾವುದೇ ದೃಢೀಕರಣ ಲಭ್ಯವಾಗಿಲ್ಲ.

ಕಳೆದ ಎರಡು ಆವೃತ್ತಿಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಪಂತ್, ತಂಡ ತೊರೆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪಂತ್ ಅವರನ್ನು ಬೀಳ್ಕೊಟ್ಟ ಲಕ್ನೋ ಫ್ರಾಂಚೈಸಿಯ ಪೋಸ್ಟ್ ಅನ್ನು ಮರುಹಂಚಿಕೊಂಡಿರುವ ಅವರು, ಕೇವಲ “Thank You Team” ಎಂಬ ಮೂರು ಪದಗಳ ಸಂದೇಶದ ಮೂಲಕ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಅಂಕಿಅಂಶಗಳತ್ತ ಗಮನ ಹರಿಸಿದರೆ, ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಲಕ್ನೋ ಪರ 28 ಪಂದ್ಯಗಳನ್ನು ಆಡಿರುವ ರಿಷಭ್ ಪಂತ್, ಒಂದು ಶತಕ ಹಾಗೂ ಒಂದು ಅರ್ಧಶತಕದ ನೆರವಿನಿಂದ ಒಟ್ಟು 581 ರನ್ ಗಳಿಸಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ 2016ರಿಂದ 2024ರವರೆಗೆ ಒಂಬತ್ತು ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದ ಅವರು, 111 ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ, 43 ಪಂದ್ಯಗಳಲ್ಲಿ ನಾಯಕತ್ವದ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!