Home Raichur ‘ಸತ್ತವರ ಖಾತೆಗೆ ಹಣ ಹೋಗಿದೆ, ಸರಿಪಡಿಸುತ್ತಿದ್ದೇವೆ’: ಗೃಹಲಕ್ಷ್ಮಿ ವಿವಾದಕ್ಕೆ ಹೆಚ್‌.ಎಂ. ರೇವಣ್ಣ ಸ್ಪಷ್ಟನೆ

‘ಸತ್ತವರ ಖಾತೆಗೆ ಹಣ ಹೋಗಿದೆ, ಸರಿಪಡಿಸುತ್ತಿದ್ದೇವೆ’: ಗೃಹಲಕ್ಷ್ಮಿ ವಿವಾದಕ್ಕೆ ಹೆಚ್‌.ಎಂ. ರೇವಣ್ಣ ಸ್ಪಷ್ಟನೆ

0
‘ಸತ್ತವರ ಖಾತೆಗೆ ಹಣ ಹೋಗಿದೆ, ಸರಿಪಡಿಸುತ್ತಿದ್ದೇವೆ’: ಗೃಹಲಕ್ಷ್ಮಿ ವಿವಾದಕ್ಕೆ ಹೆಚ್‌.ಎಂ. ರೇವಣ್ಣ ಸ್ಪಷ್ಟನೆ
Spread the love

ರಾಯಚೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಿಎಜಿ ವರದಿಯಲ್ಲಿರುವ 60 ಕೋಟಿ ರೂ. ಹಣ ಬ್ಯಾಂಕ್ ಖಾತೆ ಇಲ್ಲದವರಿಗೆ ಜಮೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್‌.ಎಂ. ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಆದರೆ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವುದು ನಿಜವಾಗಿದ್ದು, ಆ ಹಣವನ್ನು ಮರುಪಡೆಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ವೇಳೆ 2.80 ಲಕ್ಷ ಮೃತ ಫಲಾನುಭವಿಗಳು ಪತ್ತೆಯಾಗಿದ್ದು, ಅವರ ಖಾತೆಗಳಿಗೆ 115 ಕೋಟಿ ರೂ. ಜಮೆಯಾಗಿರುವುದು ಗೊತ್ತಾಗಿದೆ. ಇದರಲ್ಲಿ 15 ಕೋಟಿ ರೂ. ಈಗಾಗಲೇ ವಾಪಸ್ ಪಡೆಯಲಾಗಿದ್ದು, ಉಳಿದ 100 ಕೋಟಿ ರೂ. ವಸೂಲಿಗೆ ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು.

ಒಂದೇ ಬ್ಯಾಂಕ್ ಖಾತೆಗೆ 20 ಮಂದಿ ಫಲಾನುಭವಿಗಳ ಹಣ ಜಮೆಯಾಗಿದೆ ಎಂಬ ಆರೋಪದ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಯೋಜನೆ ಆರಂಭದ ವೇಳೆಯಲ್ಲಿ ಸಂಪೂರ್ಣ ಆನ್‌ಲೈನ್ ನೋಂದಣಿ ಹಾಗೂ ಹಣ ವರ್ಗಾವಣೆ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಕೆಲವು ತಾಂತ್ರಿಕ ಲೋಪಗಳು ಕಂಡುಬಂದಿವೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿರುವ ಪ್ರಕರಣಗಳು ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ನಕಲಿ ರೇಷನ್ ಕಾರ್ಡ್ ಬಳಕೆಯ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕೆಗೆ ಪ್ರತಿಕ್ರಿಯಿಸಿದ ರೇವಣ್ಣ, “ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಕಾಂಗ್ರೆಸ್ ಸರ್ಕಾರ. ಲೋಪಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದವರಿಗೆ ಈಗ ಉತ್ತರ ಸಿಕ್ಕಿದೆ” ಎಂದು ತಿರುಗೇಟು ನೀಡಿದರು.


Spread the love

LEAVE A REPLY

Please enter your comment!
Please enter your name here