Home Karnataka News ಮಳೆ ಕೊರತೆಯಿಂದ ಕುರಿ ಸಾಕಾಣಿಕೆಗೆ ಭಾರೀ ಹೊಡೆತ; ಸಂಕಷ್ಟದಲ್ಲಿ ಕುರಿಗಾಹಿಗಳ ಬದುಕು!

ಮಳೆ ಕೊರತೆಯಿಂದ ಕುರಿ ಸಾಕಾಣಿಕೆಗೆ ಭಾರೀ ಹೊಡೆತ; ಸಂಕಷ್ಟದಲ್ಲಿ ಕುರಿಗಾಹಿಗಳ ಬದುಕು!

0
ಮಳೆ ಕೊರತೆಯಿಂದ ಕುರಿ ಸಾಕಾಣಿಕೆಗೆ ಭಾರೀ ಹೊಡೆತ; ಸಂಕಷ್ಟದಲ್ಲಿ ಕುರಿಗಾಹಿಗಳ ಬದುಕು!
Spread the love

ಬೀದರ್: ಮಳೆಗಾಲ ಆರಂಭವಾಗಿ ಹಲವು ವಾರಗಳು ಕಳೆದರೂ ಬೀದರ್ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರ ಜೊತೆಗೆ ಕುರಿ-ಮೇಕೆ ಸಾಕಾಣಿಕೆಯನ್ನು ಅವಲಂಬಿಸಿರುವ ಕುರಿಗಾಹಿಗಳ ಜೀವನವೂ ಸಂಕಷ್ಟಕ್ಕೆ ಸಿಲುಕಿದೆ.

ಕಾಡು ಹಾಗೂ ಬಯಲು ಪ್ರದೇಶಗಳಲ್ಲಿ ಹಸಿರು ಸಂಪೂರ್ಣ ಮಾಯವಾಗಿದ್ದು, ಕುರಿಗಳಿಗೆ ಮೇವು ಮತ್ತು ಕುಡಿಯುವ ನೀರು ಸಿಗದೆ ಕುರಿಗಾಹಿಗಳು ಪ್ರತಿದಿನ ಹತ್ತಾರು ಕಿಲೋಮೀಟರ್ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಾರಿ ಮುಂಗಾರು ಕೈಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಬಯಲು ಪ್ರದೇಶಗಳು ಸಂಪೂರ್ಣ ಒಣಗಿದ್ದು, ಸಾಮಾನ್ಯವಾಗಿ ಹಚ್ಚಹಸಿರಿನಿಂದ ಕಂಗೊಳಿಸುವ ಪ್ರದೇಶಗಳು ಈಗ ಬರಿದಾಗಿವೆ. ಕಾಡಿನಲ್ಲೂ ಮೇವು ಸಿಗದ ಕಾರಣ ಕುರಿಗಾಹಿಗಳು ಪ್ರತಿದಿನ ಹೊಸ ಪ್ರದೇಶಗಳ ಹುಡುಕಾಟದಲ್ಲಿ ಅಲೆದಾಡುತ್ತಿದ್ದಾರೆ.

ಬೆಳಗ್ಗೆಯಿಂದಲೇ ನೂರಾರು ಕುರಿಗಳನ್ನು ಕರೆದುಕೊಂಡು ಕಾಡು, ಗುಡ್ಡ ಹಾಗೂ ಬಯಲು ಪ್ರದೇಶಗಳಲ್ಲಿ ಸುತ್ತಾಡಿದರೂ ಸಮರ್ಪಕ ಮೇವು ದೊರೆಯುತ್ತಿಲ್ಲ. ಇದರಿಂದ ಕುರಿಗಳನ್ನು ಸಾಕುವುದು ದಿನದಿಂದ ದಿನಕ್ಕೆ ಸವಾಲಾಗಿ ಪರಿಣಮಿಸಿದೆ.

ಕೆರೆ, ಹಳ್ಳ ಹಾಗೂ ನೀರಿನ ತೊರೆಗಳು ಬತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದೆ. ಕೆಲವೊಮ್ಮೆ ದೂರದ ಗ್ರಾಮಗಳಿಗೆ ತೆರಳಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಮೇವು ಹುಡುಕುವ ಅನಿವಾರ್ಯತೆ ಎದುರಾಗಿದೆ.

ಕಳೆದ ಮೂರು ತಿಂಗಳಿಂದ ಇದೇ ಪರಿಸ್ಥಿತಿ ಮುಂದುವರಿದಿದ್ದು, ಸಮರ್ಪಕ ಆಹಾರ ಸಿಗದ ಕಾರಣ ಕುರಿಗಳ ತೂಕ ಗಣನೀಯವಾಗಿ ಇಳಿಕೆಯಾಗುತ್ತಿದೆ. ಹಸಿವಿನಿಂದ ಬಳಲುತ್ತಿರುವ ಕುರಿಗಳು ದುರ್ಬಲವಾಗುತ್ತಿದ್ದು, ವಿವಿಧ ರೋಗಗಳಿಗೆ ತುತ್ತಾಗುವ ಆತಂಕ ಹೆಚ್ಚಿದೆ.

ಇದರಿಂದ ಕುರಿ ಸಾಕಾಣಿಕೆಯನ್ನು ಜೀವನೋಪಾಯವಾಗಿ ನಂಬಿಕೊಂಡಿರುವ ಕುಟುಂಬಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಅಗತ್ಯ ನೆರವು ನೀಡಬೇಕು ಎಂದು ಕುರಿಗಾಹಿಗಳು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here