HomeBengaluru Newsಕೆಆರ್‌ಪುರ ತ್ರಿವಳಿ ಕೊಲೆ ಪ್ರಕರಣ: ಮೂವರನ್ನು ನಾವೇ ಕೊಂದಿದ್ದೇವೆ ಎಂದು ತಪ್ಪೊಪ್ಪಿಕೊಂಡ ಆರೋಪಿಗಳು!

ಕೆಆರ್‌ಪುರ ತ್ರಿವಳಿ ಕೊಲೆ ಪ್ರಕರಣ: ಮೂವರನ್ನು ನಾವೇ ಕೊಂದಿದ್ದೇವೆ ಎಂದು ತಪ್ಪೊಪ್ಪಿಕೊಂಡ ಆರೋಪಿಗಳು!

For Dai;y Updates Join Our whatsapp Group

ಬೆಂಗಳೂರು: ಕೆಆರ್‌ಪುರದ ಸಿಗೇಹಳ್ಳಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್, ಮೂವರು ಕುಟುಂಬ ಸದಸ್ಯರನ್ನು ತಾವೇ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಕಳೆದ ಸೋಮವಾರ ಕೌಟುಂಬಿಕ ಕಲಹದ ಹಿನ್ನೆಲೆ ಶ್ವೇತಾ ಹಾಗೂ ಕೆನತ್ ಸೇರಿ, ಶ್ವೇತಾಳ ತಂದೆ ಸೋಮಸುಂದರ್, ತಾಯಿ ಮುತ್ತುಲಕ್ಷ್ಮೀ ಮತ್ತು ಸಹೋದರಿ ಸುಪ್ರಿಯಾ ಅವರನ್ನು ಸಿಗೇಹಳ್ಳಿಯ ಫ್ಲ್ಯಾಟ್‌ನಲ್ಲಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಘಟನೆ ಬಳಿಕ ಇಬ್ಬರೂ ಪರಾರಿಯಾಗಿದ್ದು, ಪುದುಚೇರಿಯಲ್ಲಿ ಪೊಲೀಸರು ಬಂಧಿಸಿದ್ದರು.

ಬಂಧನದ ಬಳಿಕ ಕೆಆರ್‌ಪುರ ಪೊಲೀಸರು ಆರೋಪಿಗಳ ಪ್ರಾಥಮಿಕ ವಿಚಾರಣೆ ನಡೆಸಿದ ವೇಳೆ, “ಮೂವರನ್ನು ನಾವೇ ಕೊಲೆ ಮಾಡಿದ್ದೇವೆ” ಎಂದು ಇಬ್ಬರೂ ಒಪ್ಪಿಕೊಂಡಿದ್ದಾರೆ. ಆದರೆ ಕೊಲೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಆರೋಪಿಗಳು ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಪ್ರಕರಣದ ಸತ್ಯಾಸತ್ಯತೆ ಹಾಗೂ ಕೊಲೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ನ್ಯಾಯಾಲಯದ ಆದೇಶದಂತೆ ಶ್ವೇತಾ ಮತ್ತು ಕೆನತ್ ಅವರನ್ನು ತಲಾ 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ತ್ರಿವಳಿ ಕೊಲೆಯ ಹಿಂದಿನ ನಿಜವಾದ ಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಬಹಿರಂಗವಾಗಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img