HomeKarnataka Newsಬೆಂಗಳೂರು ಜನರಿಗೆ ಸಿಹಿಸುದ್ದಿ: ನಗರದ ಮೊದಲ ಟನಲ್ ರಸ್ತೆ ಯೋಜನೆಗೆ ಇಂದು ಶಂಕುಸ್ಥಾಪನೆ

ಬೆಂಗಳೂರು ಜನರಿಗೆ ಸಿಹಿಸುದ್ದಿ: ನಗರದ ಮೊದಲ ಟನಲ್ ರಸ್ತೆ ಯೋಜನೆಗೆ ಇಂದು ಶಂಕುಸ್ಥಾಪನೆ

For Dai;y Updates Join Our whatsapp Group

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಿರ್ಮಾಣವಾಗುತ್ತಿರುವ ಬೆಂಗಳೂರಿನ ಮೊದಲ ಟನಲ್ ರಸ್ತೆ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್‌ವರೆಗೆ ನಿರ್ಮಾಣವಾಗಲಿರುವ 2.2 ಕಿಲೋಮೀಟರ್ ಉದ್ದದ ಟನಲ್ ರಸ್ತೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳಗ್ಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಈ ಯೋಜನೆಯು ರಾಜ್ಯದ ಮಹತ್ವಾಕಾಂಕ್ಷೆಯ ಪೈಲಟ್ ಪ್ರಾಜೆಕ್ಟ್ ಆಗಿದ್ದು, ಸಂಚಾರ ದಟ್ಟಣೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಹೆಬ್ಬಾಳ, ಯಲಹಂಕ ಹಾಗೂ ಬ್ಯಾಟರಾಯನಪುರ ಭಾಗಗಳಿಗೆ ಸಂಚರಿಸುವ ವಾಹನ ಸವಾರರಿಗೆ ಈ ಟನಲ್ ರಸ್ತೆ ನಿರ್ಮಾಣದಿಂದ ಹೆಚ್ಚಿನ ಅನುಕೂಲವಾಗಲಿದೆ. ಕಾಮಗಾರಿಯನ್ನು 18 ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಯೋಜನೆಗೆ 1,199 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದರು.

ಹೈದರಾಬಾದ್ ಮೂಲದ ಖಾಸಗಿ ಕಂಪನಿಯೊಂದು ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಕಾಮಗಾರಿ ವೇಳೆ ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಅವರು ಹೇಳಿದರು.

ಟನಲ್ ರಸ್ತೆ ಪೂರ್ಣಗೊಂಡ ಬಳಿಕ ನಗರದಲ್ಲಿನ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಟನಲ್ ರಸ್ತೆಗಳ ಮಾದರಿ ಯಶಸ್ವಿಯಾಗಿದ್ದು, ಬೆಂಗಳೂರಿನಲ್ಲೂ ಇದೇ ರೀತಿಯ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

ಟನಲ್ ರಸ್ತೆ ಯೋಜನೆಗೆ ಅನಗತ್ಯ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ. ಇದು ಸಂಪೂರ್ಣವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಯಾಗಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img