ಗದಗ: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ನಜೀರ್ ಸಾಬ್ ಎಂಬಾತ ಈ ಕೃತ್ಯ ಎಸಗಿದ ವ್ಯಕ್ತಿ.
ಸೋಮವಾರ ಮಧ್ಯಾಹ್ನ ಮದ್ಯದ ಅಮಲಿನಲ್ಲಿ
ಮನನೊಂದ ನಜೀರ್ ಸಾಬ್ ನೇರವಾಗಿ ಗ್ರಾಮದ ಮೊಬೈಲ್ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು ಸಮಯ ಮನವೊಲಿಕೆ ನಡೆಸಿದ ಬಳಿಕ ನಜೀರ್ ಸಾಬ್ನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
ಕಾರ್ಯಾಚರಣೆ ವೇಳೆ ಕೆಲಕಾಲ ಹುಚ್ಚಾಟ ಮೆರೆದ ನಜೀರ್ ಸಾಬ್ನ್ನು ಕೊನೆಗೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



