HomeEntertainment'ದರ್ಶನ್ ವಿರುದ್ಧ ಸಾಕ್ಷಿ ಹೇಳಿದ್ರೆ ಜೀವ ಉಳಿಯಲ್ಲ'; ಕೋರ್ಟ್ ಸಾಕ್ಷಿಗೆ ಧಮ್ಕಿ, ಫ್ಯಾನ್ ಗ್ಯಾಂಗ್‌ನ ಮೂವರು...

‘ದರ್ಶನ್ ವಿರುದ್ಧ ಸಾಕ್ಷಿ ಹೇಳಿದ್ರೆ ಜೀವ ಉಳಿಯಲ್ಲ’; ಕೋರ್ಟ್ ಸಾಕ್ಷಿಗೆ ಧಮ್ಕಿ, ಫ್ಯಾನ್ ಗ್ಯಾಂಗ್‌ನ ಮೂವರು ಪೊಲೀಸ್ ಬಲೆಗೆ

For Dai;y Updates Join Our whatsapp Group

ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಹಾಕಿ ನ್ಯಾಯಾಲಯದಲ್ಲಿ ಆರೋಪಿಗಳ ಪರವಾಗಿ ಹೇಳಿಕೆ ನೀಡುವಂತೆ ಒತ್ತಡ ಹೇರಿದ ಆರೋಪದಡಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ 49ನೇ ಸಾಕ್ಷಿಯಾಗಿರುವ ಸಂದೀಪ್ ಅವರು ನ್ಯಾಯಾಲಯದಲ್ಲಿ ಸಾಕ್ಷಿ ಹೇಳುವ ಮುನ್ನವೇ ಅಪರಿಚಿತರಿಂದ ಬೆದರಿಕೆ ಎದುರಿಸಿದ್ದಾಗಿ ನ್ಯಾಯಾಧೀಶರ ಮುಂದೆ ಬಹಿರಂಗಪಡಿಸಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಪೊಲೀಸರು ಅವರಿಗೆ ಬಿಗಿ ಭದ್ರತೆ ಒದಗಿಸಿ, ವಿಶೇಷ ತನಿಖಾ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ವೇಣು, ಸುಹಾಸ್ ಹಾಗೂ ಪುನೀತ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ತನಿಖೆಯಲ್ಲಿ ಆರೋಪಿಗಳ ಸಂಚಿನ ವಿವರಗಳು ಬೆಳಕಿಗೆ ಬಂದಿವೆ. ಸಂದೀಪ್ ಅವರನ್ನು ಮಾತುಕತೆ ನೆಪದಲ್ಲಿ ಕರೆಸಿಕೊಂಡ ಆರೋಪಿಗಳು, ಬಳಿಕ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ವಿವಿಧ ಕಡೆ ಸುತ್ತಾಡಿಸಿದ್ದಾರೆ. ಈ ವೇಳೆ “ದರ್ಶನ್ ವಿರುದ್ಧ ಕೋರ್ಟ್‌ನಲ್ಲಿ ಸಾಕ್ಷಿ ಹೇಳಬಾರದು, ಆರೋಪಿಗಳನ್ನು ಗುರುತಿಸಲು ಆಗಲ್ಲ ಎಂದು ಹೇಳಬೇಕು” ಎಂದು ನಿರಂತರ ಒತ್ತಡ ಹೇರಲಾಗಿದೆ ಎನ್ನಲಾಗಿದೆ. ಸಾಕ್ಷಿದಾರ ನಿರಾಕರಿಸಿದಾಗ, ಜೈಲಿನಲ್ಲಿರುವ ದರ್ಶನ್ ಹೆಸರನ್ನು ಉಲ್ಲೇಖಿಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ.

ಬಂಧಿತರ ಪೈಕಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ‘ಡಿ ಕಂಪನಿ’ ಹೆಸರಿನ ದರ್ಶನ್ ಅಭಿಮಾನಿಗಳ ಫ್ಯಾನ್ ಪೇಜ್ ನಿರ್ವಹಿಸುತ್ತಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಇನ್ನಿಬ್ಬರು ಆರೋಪಿಗಳಾದ ವೇಣು ಹಾಗೂ ಸುಹಾಸ್ ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿ ಹಲವರು ಆರೋಪಿಗಳಾಗಿದ್ದು, ಬೆಂಗಳೂರಿನ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೇ ವೇಳೆ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಯತ್ನ ಬೆಳಕಿಗೆ ಬಂದಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರ ಹಿಂದೆ ಇನ್ನಾರಾದರೂ ಇದ್ದಾರೆಯೇ ಎಂಬ ಆಯಾಮದಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img