HomeBengaluru Cityಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್! ಯತೀಂದ್ರ ಖಾತೆ ಬದಲಾಯಿಸಿ; ಡಿಕೆ ಶಿವಕುಮಾರ್‌ಗೆ ಪತ್ರ ಬರೆದ ಹೋರಾಟಗಾರರು

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್! ಯತೀಂದ್ರ ಖಾತೆ ಬದಲಾಯಿಸಿ; ಡಿಕೆ ಶಿವಕುಮಾರ್‌ಗೆ ಪತ್ರ ಬರೆದ ಹೋರಾಟಗಾರರು

For Dai;y Updates Join Our whatsapp Group

ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ನಗರಾಭಿವೃದ್ಧಿ ಖಾತೆಯನ್ನು ತಕ್ಷಣವೇ ಹಿಂಪಡೆದು ಬದಲಿ ಇಲಾಖೆ ನೀಡುವಂತೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದೆ.

ವೇದಿಕೆಯ ಪರ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್ ಸಲ್ಲಿಸಿರುವ ಪತ್ರದಲ್ಲಿ, ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾರ್ವತಿ ಆರೋಪಿಗಳಾಗಿರುವ ಹಿನ್ನೆಲೆಯಲ್ಲಿ, ಅವರ ಪುತ್ರರಾಗಿರುವ ಯತೀಂದ್ರ ಅದೇ ಇಲಾಖೆಯ ಸಚಿವರಾಗಿರುವುದು ‘ಹಿತಾಸಕ್ತಿ ಸಂಘರ್ಷ’ಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಲಾಗಿದೆ.

ಪ್ರಕರಣ ಈಗಾಗಲೇ ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಿಮಿನಲ್ ಪ್ರಕರಣ, ಕರ್ನಾಟಕ ಹೈಕೋರ್ಟ್ ಹಾಗೂ ಜಾರಿ ನಿರ್ದೇಶನಾಲಯದ ತನಿಖೆಯ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಮೇಲಿನ ಅಧಿಕಾರ ನಿಷ್ಪಕ್ಷಪಾತ ತನಿಖೆಯ ಕುರಿತು ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪಾರದರ್ಶಕ ಆಡಳಿತ ಹಾಗೂ ನಿಷ್ಪಕ್ಷಪಾತ ತನಿಖೆ ದೃಷ್ಟಿಯಿಂದ ಯತೀಂದ್ರ ಅವರಿಗೆ ನಗರಾಭಿವೃದ್ಧಿ ಖಾತೆಯ ಬದಲು ಮತ್ತೊಂದು ಇಲಾಖೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವೇದಿಕೆ ಒತ್ತಾಯಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img