HomeGadag Newsಲಕ್ಷ್ಮೇಶ್ವರವನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ; ಸರ್ಕಾರಕ್ಕೆ ಕರವೇ ಆಗ್ರಹ

ಲಕ್ಷ್ಮೇಶ್ವರವನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ; ಸರ್ಕಾರಕ್ಕೆ ಕರವೇ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ಆಗ್ರಹಿಸಿದೆ.

ಜಿಲ್ಲಾಧ್ಯಕ್ಷ ಶರಣು ಗೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್ ಧನಂಜಯ ಎಂ. ಅವರಿಗೆ ಮನವಿ ಸಲ್ಲಿಸಿ, ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಶರಣು ಗೋಡಿ, 2026-27ರ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಹೆಸರು, ಜೋಳ, ಮೆಣಸಿನಕಾಯಿ, ಬೆಳ್ಳುಳ್ಳಿ, ಮೆಕ್ಕೆಜೋಳ, ಹತ್ತಿ, ತೊಗರಿ ಹಾಗೂ ಶೇಂಗಾ ಸೇರಿದಂತೆ ಬಹುತೇಕ ಬೆಳೆಗಳು ಒಣಗುತ್ತಿವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮಸ್ಯೆಯೂ ಗಂಭೀರವಾಗಿದ್ದು, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ರೈತರಿಂದ ಬೆಳೆ ವಿಮೆ ಪರಿಹಾರದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಏಜೆಂಟರ ಹಸ್ತಕ್ಷೇಪವನ್ನು ತಡೆಗಟ್ಟಬೇಕು. 2025-26ರ ಹಿಂಗಾರು ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಬೇಕು. ರಾಷ್ಟ್ರ ಹಾಗೂ ರಾಜ್ಯ ಬೆಳೆ ವಿಮೆ ಯೋಜನೆಯಡಿ ಅರ್ಹ ರೈತರಿಗೆ ಶೀಘ್ರ ಪರಿಹಾರ ನೀಡಬೇಕು. ಏಜೆಂಟರ ಮೂಲಕವಲ್ಲದೆ ನೇರವಾಗಿ ವಿಮೆ ಮಾಡಿಸಿರುವ ರೈತರಿಗೆ ಬಾಕಿ ಇರುವ ವಿಮೆ ಮೊತ್ತವನ್ನು ಕೂಡಲೇ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಾಂತೇಶ ಮಣಕವಾಡ, ಮಲ್ಲಿಕಾರ್ಜುನ ನಿರಾಲೋಟಿ, ವಿನಯ ಪಾಟೀಲ, ಆನಂದ ಅಮರಶೆಟ್ಟಿ, ಸಿರಾಜ್ ಡಾಲಾಯತ, ಪ್ರವೀಣ ಆಚಾರಿ, ಲುಕಮಾನ ಬೆಟಗೇರಿ, ಕೈಸರ ಮಹಮ್ಮದ್ ಅಲಿ, ಮಹಾಂತೇಶ ಇಟಗಿ, ನಾಗರಾಜ ಸಾಲಾವಳಿಮಠ, ಕಿರಣ ಬಡಿಗೇರ, ಅಷ್ಪಾಕ್ ಬಾಗೋಡಿ, ಮಲ್ಲೇಶ ಬನ್ನಿ, ದುದ್ದು ಅಕ್ಕಿ, ಆಕಾಶ ಭಜಂತ್ರಿ, ಬಸವರಾಜ ಬೂದಿಹಾಳ, ಮಲ್ಲಿಕಜಾನ್ ಗದವಾಲ್, ನವಾಜ್ ಅತ್ತಾರ ಹಾಗೂ ಧರ್ಮಸಿಂಗ್ ಕಿಲ್ಲೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆ ವಿಮೆ ಹಾಗೂ ಪರಿಹಾರವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಬೇಕು.”

ಶರಣು ಗೋಡಿ, ಕರವೇ (ಸ್ವಾಭಿಮಾನಿ ಸೇನೆ) ಜಿಲ್ಲಾಧ್ಯಕ್ಷ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img