ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ, ಬಹುಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ ನೇತೃತ್ವದ ನಿಯೋಗವು ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿತು.
ನಿಯೋಗವು ಅತಿಥಿ ಉಪನ್ಯಾಸಕರ ಪ್ರಸ್ತುತ ಸಮಸ್ಯೆಗಳು, ಸೇವಾ ಭದ್ರತೆ ಹಾಗೂ ಭವಿಷ್ಯದ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಮಸ್ಯೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರದಲ್ಲೇ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೆಳಗಾವಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಎ.ಬಿ. ಇಟಗಿ, ಪ್ರಧಾನ ಕಾರ್ಯದರ್ಶಿ ನೀಲಕಂಠ ಬೊಮ್ಮಣ್ಣವರ, ಎಸ್.ಬಿ. ಕುರಿ, ಬಿ.ಎಸ್. ಹೊಸಮನಿ, ಇರ್ಫಾನ್ ಕಿಲ್ಲೇದಾರ, ಮುತ್ತು ಜಿ. ಗಾಣಿಗೇರ ಸೇರಿದಂತೆ ಸಂಘದ ಪ್ರಮುಖರು ಉಪಸ್ಥಿತರಿದ್ದರು.



