HomeGadag Newsನಿಖರ ದತ್ತಾಂಶವೇ ಅಭಿವೃದ್ಧಿಯ ದಿಕ್ಸೂಚಿ: ಸಿ.ಆರ್. ಮುಂಡರಗಿ

ನಿಖರ ದತ್ತಾಂಶವೇ ಅಭಿವೃದ್ಧಿಯ ದಿಕ್ಸೂಚಿ: ಸಿ.ಆರ್. ಮುಂಡರಗಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಪಾರದರ್ಶಕ, ಜವಾಬ್ದಾರಿಯುತ ಹಾಗೂ ಜನಸ್ನೇಹಿ ಆಡಳಿತ ವ್ಯವಸ್ಥೆ ರೂಪಿಸಲು ನಿಖರವಾದ ಅಂಕಿ-ಅಂಶಗಳು ಮತ್ತು ಆಡಳಿತಾತ್ಮಕ ದತ್ತಾಂಶದ ಸಮರ್ಪಕ ಬಳಕೆ ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ವತಿಯಿಂದ ಭಾರತೀಯ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ. ಪಿ.ಸಿ. ಮಹಲನೋಬಿಸ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ (ಮಹಲನೋಬಿಸ್ ದಿನಾಚರಣೆ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ವರ್ಷದ ಧ್ಯೇಯವಾದ “ಆಡಳಿತಾತ್ಮಕ ದತ್ತಾಂಶದ ಸಾಮರ್ಥ್ಯವನ್ನು ಮುಕ್ತಗೊಳಿಸುವುದು” ಎಂಬ ಪರಿಕಲ್ಪನೆಯನ್ನು ಪ್ರತಿಯೊಂದು ಸರ್ಕಾರಿ ಇಲಾಖೆಯ ಕಾರ್ಯವೈಖರಿಯಲ್ಲಿ ಅಳವಡಿಸಿಕೊಳ್ಳಬೇಕು. ವಿಶ್ವಾಸಾರ್ಹ ದತ್ತಾಂಶದ ಆಧಾರದ ಮೇಲೆ ತೆಗೆದುಕೊಳ್ಳುವ ನಿರ್ಧಾರಗಳು ಆಡಳಿತದ ಗುಣಮಟ್ಟವನ್ನು ಮತ್ತಷ್ಟು ಉತ್ತಮಗೊಳಿಸುತ್ತವೆ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಜಯದೇವಿ ಅರಕೇರಿಮಠ ಮಾತನಾಡಿ, ಆಡಳಿತಾತ್ಮಕ ದತ್ತಾಂಶವನ್ನು ಕೇವಲ ದಾಖಲೆಯಾಗಿ ಸಂಗ್ರಹಿಸಿಡದೇ, ಅಭಿವೃದ್ಧಿ ಯೋಜನೆಗಳ ರೂಪುರೇಷೆ, ನೀತಿ ನಿರೂಪಣೆ ಹಾಗೂ ದೈನಂದಿನ ಆಡಳಿತಾತ್ಮಕ ನಿರ್ಧಾರಗಳಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ಮಾನವ ಅಭಿವೃದ್ಧಿ ಸೂಚ್ಯಂಕ ಸೇರಿದಂತೆ ವಿವಿಧ ಅಭಿವೃದ್ಧಿ ಮಾನದಂಡಗಳ ನಿರ್ಧಾರದಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಮಹತ್ವದ್ದಾಗಿದೆ. ದೇಶದ ಆರ್ಥಿಕ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಪ್ರೊ. ಪಿ.ಸಿ. ಮಹಲನೋಬಿಸ್ ಅವರ ಕೊಡುಗೆ ಶಾಶ್ವತವಾಗಿ ಸ್ಮರಣೀಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಬಿ.ಎಸ್. ಪಾಟೀಲ ಮಾತನಾಡಿ, ಇಲಾಖೆಯ ಸಿಬ್ಬಂದಿ ದತ್ತಾಂಶ ಸಂಗ್ರಹಣೆ ಮತ್ತು ನಿರ್ವಹಣೆಯಲ್ಲಿ ನಿಖರತೆಗೆ ಆದ್ಯತೆ ನೀಡಿ, ಜನಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವೃತ್ತ ಹಿರಿಯ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಬಿ.ಎಲ್. ಕೊಪ್ಪಳ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಸಾಂಖ್ಯಿಕ ನಿರೀಕ್ಷಕಿ ಶ್ರುತಿ ಕದಂ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಅರ್ಜುನ ಕಾರ್ಯಕ್ರಮ ನಿರೂಪಿಸಿದರು. ಗಣತಿದಾರ ಕಾವ್ಯ ಕುಸ್ಲಾಪೂರು ವಂದಿಸಿದರು.

“ನಿಖರ ಅಂಕಿ-ಅಂಶಗಳ ಆಧಾರದ ಮೇಲೆ ರೂಪಿಸುವ ನೀತಿಗಳು ಮತ್ತು ಯೋಜನೆಗಳೇ ಪರಿಣಾಮಕಾರಿ ಆಡಳಿತಕ್ಕೆ ಬಲ ನೀಡುತ್ತವೆ.”

– ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img